ಮೈಸೂರಿನಲ್ಲಿ ಥರಾವರಿ ಮಾವುಗಳ ದರ್ಬಾರ್
ಮೈಸೂರು, ಮೇ 25: ಘಮ್ಮನೆ ಹೊಮ್ಮುವ ಪರಿಮಳ, ಆಕರ್ಷಕ ಬಣ್ಣ, ಮೈಮರೆಸುವ ಸ್ವಾದದಿಂದ ಸೆಳೆಯುವ ಮಾವಿನ ಹಣ್ಣುಗಳೆಂದರೆ ಯಾರಿಗಿಷ್ಟವಿಲ್ಲ? ಮಾವಿನ ಸೀಸನ್ ಆರಂಭಗೊಳ್ಳುತ್ತಿದ್ದಂತೆ ಥರಾವರಿ ತಳಿಯ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಪರಿಚಯಿಸಿ ಜಿಹ್ವೆ ತಣಿಸಲೆಂದೇ ನಡೆಯುವ ಮೇಳಗಳಿಗೂ ಕಮ್ಮಿಯಿಲ್ಲ. ಅದೇ ರೀತಿ ಮೈಸೂರಿನಲ್ಲೂ ಮಾವಿನ ಮೇಳವೊಂದು ನಡೆಯುತ್ತಿದೆ. ಫಲ ಪ್ರೇಮಿಗಳ ನಾಲಿಗೆ ತಣಿಸಲು ಈ ಮೇಳ ಆರಂಭಗೊಂಡಿದೆ.
ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತಿ ವತಿಯಿಂದ ಮೇಳವನ್ನು ನಗರದ ಕರ್ಜನ್ ಪಾರ್ಕಿನಲ್ಲಿ ನಡೆಸಲಾಗುತ್ತಿದೆ. ಮೇಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಿ ಜ್ಯೋತಿ ಚಾಲನೆ ನೀಡಿದ್ದು, ರಾಜ್ಯದ ಹಲವು ಭಾಗಗಳಿಂದ ಬಂದ ರೈತರು ತಾವು ಬೆಳೆದ ಮಾವಿನ ತಳಿಗಳನ್ನು ಪ್ರದರ್ಶಿಸುತ್ತಿದ್ದಾರೆ.
ವಿವಿಧ ತಳಿಗಳಾದ ಬಾದಾಮಿ, ಬಂಗನಪಲ್ಲಿ, ರಸಪುರಿ, ಮಲ್ಲಿಕಾ, ಸೇಂದೂರ, ಮಲಗೋಬಾ, ತೋತಾಪುರಿ, ನೀಲಂ, ಆಮ್ರಪಾಲಿ, ಕೇರ್ಸ, ದಶೇರಿ ಹಣ್ಣುಗಳನ್ನು ಇಲ್ಲಿ ನೋಡುವುದೇ ಸೊಗಸು. 32 ಬಗೆಯ ಮಾವಿನ ತಳಿಗಳೊಂದಿಗೆ ನಾಲ್ಕು ಬಗೆಯ ಹಲಸಿನ ಹಣ್ಣುಗಳು ಗ್ರಾಹಕರನ್ನು ಮೋಡಿ ಮಾಡಿದವು.

ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳಿಗೆ ವಿಶೇಷ ಬೇಡಿಕೆಯಿತ್ತು. ಕ್ಯಾಲ್ಸಿಯಂ ಕಾರ್ಬೈಡ್ ಮುಕ್ತವಾದ ಈ ಹಣ್ಣುಗಳಲ್ಲಿ ವಿಷವಿಲ್ಲ ಎಂಬುದನ್ನು ಅರಿತ ಜನತೆಗೆ ಹಬ್ಬದೂಟ ಬಡಿಸಿದಂತೆ ಆಗಿತ್ತು. ಈ ಬಾರಿ ಪರಿಸರ ಸ್ನೇಹಿ ಮೇಳ ಆಯೋಜನೆ ವಿಶೇಷವೆನಿಸಿದೆ. ಪ್ಲಾಸ್ಟಿಕ್ ಬದಲು ಬಟ್ಟೆ ಬ್ಯಾಗ್ ಬಳಸಲು ತೋಟಗಾರಿಕೆ ಇಲಾಖೆಯಿಂದ ಮನವಿ ಮಾಡಲಾಗಿದೆ.
ಮೇಳದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಜಿಲ್ಲೆಗಳ ಮಾವು ಬೆಳೆಗಾರರು ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಹಾಗೂ ಹಲಸು ಬೆಳೆಗಾರರು ಭಾಗಿಯಾಗಿದ್ದರು. ಮೇ 24ರಿಂದ 29ರವರೆಗೆ ಈ ರುಚಿಕರ ಮೇಳ ನಡೆಯಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications