Modi visit Mysuru: ತುಕ್ಡೆ-ತುಕ್ಡೆ ಗ್ಯಾಂಗಿನ ಸುಲ್ತಾನನಂತೆ ವರ್ತಿಸುತ್ತಿದೆ ಕಾಂಗ್ರೆಸ್: ಮೈಸೂರಿನಲ್ಲಿ ಮೋದಿ ಹೇಳಿದ್ದೇನು?
ಮೈಸೂರು ಏಪ್ರಿಲ್ 14: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರದ ಸಮಾವೇಶದಲ್ಲಿ ಭಾಗವಹಿಸಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಮ್ಮಿಕೊಳ್ಳಲಾದ ಬೃಹತ್ ಸಮಾವೇಶದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಈ ವೇಳೆ ಮೋದಿ ಅವರು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಆಶೀರ್ವಾದ ಪಡೆದರು. ಜೊತೆಗೆ ಅವರಿಗೆ ಪೇಟಾ, ಶಾಲು, ಹಾರ ಹಾಗೂ ರಾಮ,ಸೀತಾ, ಲಕ್ಷ್ಮಣನ ಮರದ ಮೂರ್ತಿಯನ್ನು ನೀಡಿ ಗೌರವಿಸಲಾಯಿತು.

ಈ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಭಾಷಣ ಆರಂಭಿಸಿದರು. ಚಾಮುಂಡೇಶ್ವರಿಗೆ ತಮ್ಮ ನಮನವನ್ನು ಸಲ್ಲಿಸುವ ಮೂಲಕ ಮಾತು ಆರಂಭಿಸಿದರು. ಆರಂಭದಲ್ಲಿ ಬಿಜೆಪಿ ಪ್ರಣಾಳಿಕೆ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದಲ್ಲಿ ಮೋದಿ ಗ್ಯಾರಂಟಿಯೇ ನೈಜ ಗ್ಯಾರಂಟಿ. ಮೋದಿ ಗ್ಯಾರಂಟಿ ಕರ್ನಾಟಕದ ಪ್ರತಿಯೊಬ್ಬರ ಗ್ಯಾರಂಟಿ. ಬಿಜೆಪಿ ಪ್ರಣಾಳಿಕೆ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಪ್ರಣಾಳಿಕೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾವು ರಾಮ ಮಂದಿರ ನಿರ್ಮಾಣ ಮಾಡಿದ್ದೇವೆ. ಸಂಶೋಧನೆ, ಅಭಿವೃದ್ಧಿಯಲ್ಲಿ ಭಾರತ ಮುಂಚೂಣಿಯಲ್ಲಿದೆ. ವಂದೇ ಭಾರತ್ ರೈಲು ನಮ್ಮ ದೇಶದಲ್ಲಿ ಓಡುತ್ತಿದೆ. ಬೆಂಗಳೂರು ದೇಶದಲ್ಲಿ ಐಟಿ ಹಬ್ ಆಗಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಮೋದಿ ಅವರು ಈ ಬಾರಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮೈಸೂರಿನಲ್ಲಿ ಮಾತನಾಡುವಾಗ ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಮಂಡಲಾದರು. ಕರ್ನಾಟಕದ ವಿಕಾಸಕ್ಕೆ ಸಾಕಷ್ಟು ಕೆಲಸದ ಅವಶ್ಯಕತೆ ಇದೆ. ವೋಟ್ ಬ್ಯಾಂಕ್ಗಾಗಿ ದೇಶವನ್ನು ಒಡೆಯುವವರಿಗೆ ಬೆಂಬಲಿಸಬೇಡಿ. ಅವರು ಕೋಟ್ಯಾಂತರ ಹಿಂದೂಗಳನ್ನು ಅವಮಾನಿಸಿದ್ದಾರೆ ಎಂದು ಗುಡುಗಿದರು. ಕಾಂಗ್ರೆಸ್ ತುಕಡೆ ತುಕಡೆ ಗ್ಯಾಂಗ್ ಜೊತೆ ಇದೆ. ಅವರು ವಂದೇ ಭಾರತಂ ವಿರುದ್ಧವಾಗಿದ್ದಾರೆ. ಭಾರತ್ ಮಾತಾಕಿ ಜೈ ಅನ್ನೋದಕ್ಕೆ ಅವರು ಅನುಮತಿ ಕೇಳುತ್ತಾರೆ ಎಂದು ತೀವ್ರ ವಾಗ್ದಾಳಿ ಮಾಡಿದರು. ಹೀಗಾಗಿ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಮಂಡಲಾದರು.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications