ಪಟ್ಟಭದ್ರ ಶಕ್ತಿಗಳಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಸರ್ವಜನಾಂಗದ ಶಾಂತಿಯ ತೋಟದಂತೆ ಸಮಾಜ ಇರಬೇಕು ಎಂದು ರಾಷ್ಟ್ರಕವಿ ಕುವೆಂಪು ಆಶಿಸಿದ್ದರು. ಅವರ ನುಡಿ ಸಾಕಾರವಾಗಬೇಕಾದರೆ ಎಲ್ಲರೂ ಮನುಷ್ಯರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ ತಿಳಿಸಿದರು.
ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಅಂಗವಾಗಿ ದೇಸಿ ಆಟಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲ ಪಟ್ಟಭದ್ರ ಶಕ್ತಿಗಳು ಸಮಾಜದಲ್ಲಿ ಜಾತಿಯ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ. ನಾವೆಲ್ಲರೂ ಮಾನವೀಯತೆ ಹಾಗೂ ಸಂವೇದನಾಶೀಲತೆಯನ್ನು ಮರೆಯಬಾರದು ಎಂದು ಹೇಳಿದರು.

"ಈ ಸಮಾರಂಭದ ವೇದಿಕೆಯಲ್ಲಿ ಒಕ್ಕಲಿಗರು, ಲಿಂಗಾಯತರು, ಕುರುಬನಾದ ನಾನು, ಹಿಂದುಳಿದ ವರ್ಗದವರು ಕುಳಿತಿದ್ದೇವೆ ಎಂದರೆ ಇದಕ್ಕೆ ಸಂವಿಧಾನ ಕಾರಣವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಪಟ್ಟಭದ್ರರು ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕಿದೆ" ಎಂದು ತಿಳಿಸಿದರು.
"ಸಮಾಜದಲ್ಲಿ ಇಂದಿಗೂ ಸಮಾನತೆ ಬಂದಿಲ್ಲ ಹಾಗೂ ಮೇಲು ಕೀಳೆಂಬ ಭಾವನೆಯೂ ದೂರವಾಗಿಲ್ಲ. ಜನರಿಗೆ ಕೇವಲ ಮತ ಹಾಕುವ ಸ್ವಾತಂತ್ರ್ಯ ಬಂದರೆ ಸಾಲದು. ಬದಲಾಗಿ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಸ್ವಾತಂತ್ರ್ಯಕ್ಕೂ ಸಾರ್ಥಕವಾಗಲಿದೆ. ಸಂಪತ್ತು ಅಧಿಕಾರ ಕೆಲವರ ಕೈಲಿ ಕೇಂದ್ರೀಕೃತವಾಗದೆ, ಸಮಾಜದಲ್ಲಿನ ಎಲ್ಲರಿಗೂ ಸಮಾನತೆ ಸಿಗುವಂತಾಗಬೇಕು" ಎಂದು ಆಶಿಸಿದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ಸುತ್ತೂರು ಶ್ರೀಕ್ಷೇತ್ರ ಕೇವಲ ಧಾರ್ಮಿಕ, ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೊಡುಗೆ ನೀಡಿದ್ದು, ಅದರಂತೆ ದೇಸಿ ಆಟಗಳನ್ನು ಉಳಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಧಾರ್ಮಿಕ, ಸಾಮಾಜಿಕ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸುತ್ತೂರು ಮಠ ದೇಶವೇ ಗುರುತಿಸುವ ಕೆಲಸ ಮಾಡಿದೆ. ಆ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಕೆಲಸವನ್ನು ಮಾಡಿದೆ, ಎಂದು ಶ್ಲಾಘಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಸ್ವಾತಂತ್ರ್ಯದ ಉದ್ದೇಶ ಕೋಮು ಸೌಹಾರ್ದ, ಸಾಮಾಜಿಕ ನ್ಯಾಯ, ಜಾತ್ಯಾತೀತ ಸಮಾಜದ ನಿರ್ಮಾಣ ಮಾಡುವುದಾಗಿದೆ. ಸಂವಿಧಾನದ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿದ್ದೇವೆ. ಇದಕ್ಕೆ ಸುತ್ತೂರು ಮಠ ಒತ್ತಾಸೆಯಾಗಿ ಕೆಲಸ ಮಾಡುತ್ತಾ ಬಂದಿದೆ. ಸುತ್ತೂರು ಶ್ರೀಮಠ ಎಲ್ಲಾ ಕ್ಷೇತ್ರಗಳಿಗೂ, ಎಲ್ಲಾ ಸಮುದಾಯಗಳಿಗೂ ಆದ್ಯತೆ ನೀಡಿದೆ ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications