ಪಟ್ಟಭದ್ರ ಶಕ್ತಿಗಳಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಸರ್ವಜನಾಂಗದ ಶಾಂತಿಯ ತೋಟದಂತೆ ಸಮಾಜ ಇರಬೇಕು ಎಂದು ರಾಷ್ಟ್ರಕವಿ ಕುವೆಂಪು ಆಶಿಸಿದ್ದರು. ಅವರ ನುಡಿ ಸಾಕಾರವಾಗಬೇಕಾದರೆ ಎಲ್ಲರೂ ಮನುಷ್ಯರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ ತಿಳಿಸಿದರು.
ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಅಂಗವಾಗಿ ದೇಸಿ ಆಟಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲ ಪಟ್ಟಭದ್ರ ಶಕ್ತಿಗಳು ಸಮಾಜದಲ್ಲಿ ಜಾತಿಯ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ. ನಾವೆಲ್ಲರೂ ಮಾನವೀಯತೆ ಹಾಗೂ ಸಂವೇದನಾಶೀಲತೆಯನ್ನು ಮರೆಯಬಾರದು ಎಂದು ಹೇಳಿದರು.

"ಈ ಸಮಾರಂಭದ ವೇದಿಕೆಯಲ್ಲಿ ಒಕ್ಕಲಿಗರು, ಲಿಂಗಾಯತರು, ಕುರುಬನಾದ ನಾನು, ಹಿಂದುಳಿದ ವರ್ಗದವರು ಕುಳಿತಿದ್ದೇವೆ ಎಂದರೆ ಇದಕ್ಕೆ ಸಂವಿಧಾನ ಕಾರಣವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಪಟ್ಟಭದ್ರರು ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕಿದೆ" ಎಂದು ತಿಳಿಸಿದರು.
"ಸಮಾಜದಲ್ಲಿ ಇಂದಿಗೂ ಸಮಾನತೆ ಬಂದಿಲ್ಲ ಹಾಗೂ ಮೇಲು ಕೀಳೆಂಬ ಭಾವನೆಯೂ ದೂರವಾಗಿಲ್ಲ. ಜನರಿಗೆ ಕೇವಲ ಮತ ಹಾಕುವ ಸ್ವಾತಂತ್ರ್ಯ ಬಂದರೆ ಸಾಲದು. ಬದಲಾಗಿ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಸ್ವಾತಂತ್ರ್ಯಕ್ಕೂ ಸಾರ್ಥಕವಾಗಲಿದೆ. ಸಂಪತ್ತು ಅಧಿಕಾರ ಕೆಲವರ ಕೈಲಿ ಕೇಂದ್ರೀಕೃತವಾಗದೆ, ಸಮಾಜದಲ್ಲಿನ ಎಲ್ಲರಿಗೂ ಸಮಾನತೆ ಸಿಗುವಂತಾಗಬೇಕು" ಎಂದು ಆಶಿಸಿದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ಸುತ್ತೂರು ಶ್ರೀಕ್ಷೇತ್ರ ಕೇವಲ ಧಾರ್ಮಿಕ, ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೊಡುಗೆ ನೀಡಿದ್ದು, ಅದರಂತೆ ದೇಸಿ ಆಟಗಳನ್ನು ಉಳಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಧಾರ್ಮಿಕ, ಸಾಮಾಜಿಕ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸುತ್ತೂರು ಮಠ ದೇಶವೇ ಗುರುತಿಸುವ ಕೆಲಸ ಮಾಡಿದೆ. ಆ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಕೆಲಸವನ್ನು ಮಾಡಿದೆ, ಎಂದು ಶ್ಲಾಘಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಸ್ವಾತಂತ್ರ್ಯದ ಉದ್ದೇಶ ಕೋಮು ಸೌಹಾರ್ದ, ಸಾಮಾಜಿಕ ನ್ಯಾಯ, ಜಾತ್ಯಾತೀತ ಸಮಾಜದ ನಿರ್ಮಾಣ ಮಾಡುವುದಾಗಿದೆ. ಸಂವಿಧಾನದ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿದ್ದೇವೆ. ಇದಕ್ಕೆ ಸುತ್ತೂರು ಮಠ ಒತ್ತಾಸೆಯಾಗಿ ಕೆಲಸ ಮಾಡುತ್ತಾ ಬಂದಿದೆ. ಸುತ್ತೂರು ಶ್ರೀಮಠ ಎಲ್ಲಾ ಕ್ಷೇತ್ರಗಳಿಗೂ, ಎಲ್ಲಾ ಸಮುದಾಯಗಳಿಗೂ ಆದ್ಯತೆ ನೀಡಿದೆ ಎಂದು ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications