ಮೈಸೂರಿನಲ್ಲಿ ಅಂಗಾಂಗ ಕಸಿಗೆ ಒಳಗಾಗಿದ್ದ ಮಹಿಳೆಗೆ ಹೆರಿಗೆ; ದೇಶದಲ್ಲೇ ಮೊದಲು
ಮೈಸೂರು, ಜೂನ್ 15: ಅಂಗಗಳ ಕಸಿಗೆ ಒಳಗಾಗಿದ್ದ 35 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ದೇಶದಲ್ಲಿ ಇಂತಹ ಪ್ರಕರಣ ಇದೇ ಮೊದಲಾಗಿದೆ.
ಮಂಗಳವಾರದಂದು ಮೈಸೂರು ನಗರದ ಅಪೊಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ ಆಗಿದ್ದು, ಈ ಪ್ರಕರಣ ಅಂಗಾಂಗ ವೈಫಲ್ಯದಿಂದ ಬಳಲುವವರಿಗೆ ಭರವಸೆ ಮೂಡಿಸಿದೆ.

ಬಾಲ್ಯದಿಂದಲೇ ಮಧುಮೇಹಕ್ಕೆ ಒಳಗಾಗಿದ್ದ ಮಹಿಳೆ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ)ಯಿಂದ ಬಳಲುತ್ತಿದ್ದರು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರಿಗೆ 3 ವರ್ಷದ ಹಿಂದೆ ಏಕಕಾಲಕ್ಕೆ ಮೇದೋಜಿರಕ ಹಾಗೂ ಮೂತ್ರಪಿಂಡಗಳನ್ನು ಕಸಿ (ಎಸ್ಪಿಕೆಟಿ) ಮಾಡಲಾಗಿತ್ತು.

"ಇಂದು ಯಶಸ್ವಿಯಾಗಿ ಹೆರಿಗೆಯಾಗಿದ್ದು, ಇದೀಗ ಮಗುವಿಗೆ ಬೆಳಕು ಎಂದು ಹೆಸರಿಡಲಾಗಿದೆ. ಕಸಿ ಶಸ್ತ್ರ ಚಿಕಿತ್ಸಕ ಕನ್ಸಲ್ಟೆಂಟ್ ಡಾ.ಸುರೇಶ್ ರಾಘವಯ್ಯ, ಸ್ತ್ರೀ ರೋಗ ತಜ್ಞರಾದ ಡಾ.ಬಿ.ಪಿ. ಅಂಜಲಿ, ಅರವಳಿಕೆ ತಜ್ಞರಾದ ಡಾ.ಅಂದಿತಾ ಮುಖರ್ಜಿ ಈ ಚಿಕಿತ್ಸಾ ತಂಡದಲ್ಲಿದ್ದರು,'' ಎಂದು ಆಸ್ಪತ್ರೆಯ ಆಡಳಿತ ವಿಭಾಗದ ಉಪಾಧ್ಯಕ್ಷ ಎನ್.ಜಿ. ಭರತೇಶ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications