ಗಜಪಡೆಗಳ ರಿಂಗ್ ಮಾಸ್ಟರ್ ಮಾವುತರದು ಹೀನಾಯ ಬದುಕು
ಮೈಸೂರು, ಸೆಪ್ಟೆಂಬರ್.21: ದಸರಾದ ಸೂತ್ರಧಾರಿಗಳಾದ ಗಜಪಡೆಗಳನ್ನು ಸಾಕಿ ಸಲಹುತ್ತಿರುವ ವಿವಿಧ ಆನೆ ಶಿಬಿರಗಳಲ್ಲಿ ವಾಸ ಮಾಡುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳು ಇವತ್ತು ಶೋಚನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಈ ಪೈಕಿ ಕೊಡಗಿನ ದುಬಾರೆ ಮತ್ತು ಆನೆಕಾಡು ಶಿಬಿರದಲ್ಲಿರುವ ಮಾವುತ, ಕಾವಾಡಿಗರು ಸ್ವಂತ ಸೂರಿಲ್ಲದೆ ಗುಡಿಸಲುಗಳಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದು, ಇವರಿಗೊಂದು ಶಾಶ್ವತ ನೆಲೆಯನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಎದ್ದು ಕಾಣುತ್ತಿದೆ.
ಮೈಸೂರು ದಸರಾ ರೂವಾರಿಯಾದ ಗಜಪಡೆಯನ್ನು ವರ್ಷಾನುಗಟ್ಟಲೆ ಸಾಕಿ ಸಲಹುತ್ತಾ ಅವುಗಳೊಂದಿಗೆ ಬದುಕು ಸವೆಸುತ್ತಾ ಬಂದಿರುವ ಮಾವುತ ಮತ್ತು ಕಾವಾಡಿಗಳ ಸಮಸ್ಯೆ ಹೇಳ ತೀರದಾಗಿದೆ.

ಪ್ರತಿವರ್ಷವೂ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಸಲುವಾಗಿ ಆನೆಗಳೊಂದಿಗೆ ಮೈಸೂರಿಗೆ ತೆರಳುವ ಮಾವುತರು ಮತ್ತು ಕಾವಾಡಿಗಳು ಒಂದು ತಿಂಗಳ ಕಾಲ ಭೂರಿ ಬೋಜನ ಸವಿಯುವ, ವೈದ್ಯಕೀಯ ಇನ್ನಿತರ ಸೌಲಭ್ಯಗಳನ್ನು ಪಡೆಯುವ ಮೂಲಕ ವೈಭವದ ಜೀವನ ನಡೆಸುತ್ತಾರೆ.
ಅದು ಮುಗಿದ ಬಳಿಕ ಮತ್ತೆ ಅದೇ ಮುರುಕಲು ಗುಡಿಸಲಿಗೆ ಹಿಂತಿರುಗಿ ನಿತ್ಯದ ಬದುಕನ್ನು ಸಾಗಿಸಬೇಕಾಗುತ್ತದೆ. ಈ ರೀತಿಯ ಬದುಕನ್ನು ಅವರು ಹಲವು ವರ್ಷಗಳಿಂದ ನಡೆಸುತ್ತಾ ಬಂದಿದ್ದು ತಮಗೊಂದು ಸೂರು ಕಲ್ಪಿಸಿಕೊಡಿ ಎಂದು ಒತ್ತಾಯಿಸುತ್ತಾ ಬಂದಿದ್ದರೂ ಅವರು ಮನವಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಾಗಲೀ, ಸರ್ಕಾರವಾಗಲೀ ಕಿವಿಗೆ ಹಾಕಿಕೊಂಡಂತೆ ಕಾಣುತ್ತಿಲ್ಲ.

ಹೀಗಾಗಿ ಗುಡಿಸಲ ಜೀವನ ಅವರಿಗೆ ಖಾಯಂ ಆಗಿಬಿಟ್ಟಿದೆ. ಇವತ್ತು ದುಬಾರೆ ಮತ್ತು ಆನೆಕಾಡಿನಲ್ಲಿ ವಾಸಿಸುವ ಮಾವುತರು ಮತ್ತು ಕಾವಾಡಿಗಳ ಬದುಕು ಮೂರಾಬಟ್ಟೆಯಾಗಿದೆ. ಆಧುನಿಕ ಬದುಕನ್ನು ಎಲ್ಲರೂ ಕಂಡು ಕೊಂಡಿರುವಾಗ ಇವರು ಮಾತ್ರ ಆದಿ ಮಾನವರಂತೆ ಸೌಲಭ್ಯ ವಂಚಿತರಾಗಿ ಬದುಕನ್ನು ಸವೆಸುತ್ತಿದ್ದಾರೆ.
ಈ ಬಾರಿಯ ಮಹಾಮಳೆಗೆ ಅವರು ಅನುಭವಿಸಿದ ಸಂಕಷ್ಟ ಅವರಿಗೆ ಮಾತ್ರ ಗೊತ್ತು. ಆದರೂ ಎಲ್ಲವನ್ನೂ ಎದುರಿಸಿ ಕಾಡಿನ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇಷ್ಟಕ್ಕೂ ಇಲ್ಲಿ ವಾಸಿಸುವ ಇವರಿಗೆ ಸ್ವಂತದ್ದು ಎನ್ನುವ ಭೂಮಿ ಇಲ್ಲ. ಎಲ್ಲವೂ ಅರಣ್ಯ ಇಲಾಖೆಯ ಅಧೀನದಲ್ಲಿದೆ. ಹೀಗಾಗಿ ಸೌಲಭ್ಯ ನೀಡಲು ಕಷ್ಟವಾಗಿದೆ.

ಕೊನೆ ಪಕ್ಷ ಅರಣ್ಯ ಇಲಾಖೆಯಾದರೂ ವಸತಿ ಗೃಹಗಳನ್ನು ನಿರ್ಮಿಸಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಆದರೆ ಆ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿಲ್ಲ. ಸದ್ಯದ ಮಟ್ಟಿಗೆ ದುಬಾರೆಯಲ್ಲಿ 87, ಆನೆಕಾಡಿನಲ್ಲಿ 21 ಗಿರಿಜನ ಕುಟುಂಬಗಳು ವಾಸಿಸುತ್ತಿದ್ದು, ಇವು ಮೂಲಭೂತ ಸೌಲಭ್ಯ ವಂಚಿತವಾಗಿವೆ.
ಇವರಿಗೆ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳೇ ಅರಮನೆಯಾಗಿವೆ. ಹಾಗೆ ನೋಡಿದರೆ ಆನೆ ಶಿಬಿರಗಳಲ್ಲಿ ಕೆಲಸ ಮಾಡುವ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ವಸತಿಗೃಹ, ನೀರು, ವಿದ್ಯುತ್ ಹೀಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಮಾಡಿಕೊಡಲಾಗಿದೆ.
ಆದರೆ ಆನೆಗಳನ್ನು ನೋಡಿಕೊಳ್ಳುವ ಮಾವುತ ಮತ್ತು ಕಾವಾಡಿಗಳಿಗೆ ಯಾವುದೇ ಸೌಲಭ್ಯ ನೀಡದೆ ಮುರುಕಲು ಗುಡಿಸಲಲ್ಲಿ ಇಟ್ಟಿರುವುದು ಮಾತ್ರ ಅಚ್ಚರಿ ಹುಟ್ಟಿಸುತ್ತಿದೆ. ಅವರಿಗೊಂದು ಒಳ್ಳೆಯ ಬದುಕನ್ನು ಕಟ್ಟಿಕೊಡಲು ನಮ್ಮ ಆಡಳಿತ ರೂಢರಿಗೆ ಏಕೆ ಸಾಧ್ಯವಾಗಿಲ್ಲ ಎಂಬುದು ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications