ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ನಾಟಕ, ಚೌಕಿದಾರ್ ಕಥೆ ಈ ಚುನಾವಣೇಲಿ ಮುಗಿಯಲಿದೆ:ಮಾಯಾವತಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 10:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಎಸ್ಪಿ ಅಧಿನಾಯಕಿ ಮಾಯಾವತಿ ಭರ್ಜರಿ ಪ್ರಚಾರ ನಡೆಸಿದರು.ಇದೇ ವೇಳೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮಾತನಾಡಿದ ಅವರು, ಕಮಲ ಹಾಗೂ ಕೈ ಪಕ್ಷದ ಕುರಿತಾಗಿ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇನ್ನು ಮುಂದೆ ದೇಶದಲ್ಲಿ ಕಾಂಗ್ರೆಸ್ ನ ನಾಟಕ, ಪ್ರಚಾರ ಮುಗಿಯಲಿದೆ. ಜೊತೆಗೆ ಚೌಕಿದಾರ್ ಕಥೆಯು ಈ ಚುನಾವಣೆಯಲ್ಲಿ ಮುಗಿಯಲಿದೆ. ಚೌಕಿದಾರ್ ಹೊಸ ನಾಟಕವು ಕೂಡ ಈ‌ ಚುನಾವಣೆಯಲ್ಲಿ ನಡೆಯುವುದಿಲ್ಲ. ಪ್ರಧಾನಿ‌ ಮೋದಿ ರೈತರಿಂದ ಹಿಡಿದು ಕೆಲ ವರ್ಗದ ಜನರವರೆಗೂ ನೀಡಿದ ಭರವಸೆ ಹುಸಿಯಾಗಿದೆ.ಮೋದಿ ಸರ್ಕಾರ ಪ್ರಚಾರಕ್ಕಾಗಿಯೇ ಸಾವಿರಾರು ಕೋಟಿ ನಷ್ಟ ಮಾಡಿದೆ ಎಂದು ಆರೋಪಿಸಿದರು.

 ಕರ್ನಾಟಕದತ್ತ ದೃಷ್ಟಿ ನೆಟ್ಟಿರುವ ಮಾಯಾವತಿಯ ನಿರೀಕ್ಷೆಗಳೇನು? ಕರ್ನಾಟಕದತ್ತ ದೃಷ್ಟಿ ನೆಟ್ಟಿರುವ ಮಾಯಾವತಿಯ ನಿರೀಕ್ಷೆಗಳೇನು?

ರೈತರಿಗೆ ವಿದ್ಯುತ್ ಸಮಸ್ಯೆಯಿಂದ ಎಲ್ಲಾ ರೀತಿಯ ಸಮಸ್ಯೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ನಂತೆ ಏನು ಮಾಡದೆ ಜನರನ್ನು ವಂಚಿಸಿದೆ. ಕರ್ನಾಟಕದಲ್ಲೂ ಕಡು ಬಡವರು, ಅಸಹಾಯಕರು ಇದ್ದಾರೆ. ಅವರಿಗೆ ಒಳಿತು ಮಾಡುವ ಉದ್ದೇಶ ನಮ್ಮದಾಗಿದೆ ಎಂದು ಮಾಯಾವತಿ ಭರವಸೆ ನೀಡಿದರು.

Mayawathi spoke against congress and bjp in BSP rally

ನಿಮ್ಮ ಎಲ್ಲಾ ಸಮಸ್ಯೆಗೆ ಪರಿಹಾರವೆಂದರೆ ಬಿಎಸ್ಪಿ ಗೆಲುವು. ನಾವು ದೆಹಲಿಯ ಗದ್ದುಗೆ ಏರಬೇಕಿದೆ. ಇಲ್ಲಿಂದಲು ನಮಗೆ ಸಹಕಾರ ನೀಡಿ, ನಮ್ಮ ಅಭ್ಯರ್ಥಿಗೆ ದೆಹಲಿಗೆ ಕಳುಹಿಸಿ. ಉತ್ತರ ಪ್ರದೇಶದಲ್ಲಿ 80 ಕ್ಷೇತ್ರಗಳಿವೆ. ಅದರಲ್ಲಿ‌ ಬಿಜೆಪಿ ಒಂದು ಕ್ಷೇತ್ರವೂ ಗೆಲ್ಲದೆ ಕ್ಲೀನ್ ಸ್ವೀಪ್ ಆಗಲಿದೆ. ನೀವೂ ಮೈಸೂರಿನಿಂದಲೇ ಅಭ್ಯರ್ಥಿ ಗೆಲ್ಲಿಸಿ ಸಹಕರಿಸಿ ಎಂದು ಮಾಯಾವತಿ ಮನವಿ ಮಾಡಿದರು.

 ಮುಸ್ಲಿಮರೇ ದಯವಿಟ್ಟು ಕಾಂಗ್ರೆಸ್ಸಿಗೆ ಮತಹಾಕಬೇಡಿ: ಮಾಯಾವತಿ ಮುಸ್ಲಿಮರೇ ದಯವಿಟ್ಟು ಕಾಂಗ್ರೆಸ್ಸಿಗೆ ಮತಹಾಕಬೇಡಿ: ಮಾಯಾವತಿ

ರಾಜ್ಯದಲ್ಲಿ ಬಿಎಸ್ಪಿ ಒಂದು ಹೆಜ್ಜೆ ಮುಂದಿಟ್ಟಿದೆ. ಈಗಾಗಲೇ ಎನ್ ಮಹೇಶ್ ಗೆಲ್ಲಿಸಿ ಕೊಟ್ಟಿದ್ದೀರಿ. ಇದರಿಂದ ಮಹೇಶ್ ಸಚಿವರು ಕೂಡ ಆಗಿದ್ದರು. ಈಗ ಮತ್ತಷ್ಟು ಹೆಚ್ಚಿನದಾಗಿ ನಮ್ಮ ಅಭ್ಯರ್ಥಿಯನ್ನ ಗೆಲ್ಲಿಸಿಕೊಡಿ. ಮುಂದಿನ ಕರ್ನಾಟಕದ ಚುನಾವಣೆಯಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬರಲಿದೆ. ಆ ವೇಳೆ ಮಹೇಶ್‌ರನ್ನ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಮಾಯಾವತಿ ಭರವಸೆ ನೀಡಿದರು.

Mayawathi spoke against congress and bjp in BSP rally

ಮಾಯಾವತಿ ದೇಶಕ್ಕೆ ಅನಿವಾರ್ಯ ಎಂಬ ಗೀತೆಗೆ ಮಕ್ಕಳು ನೃತ್ಯ ಮಾಡುತ್ತಿದ್ದರು. ಇದನ್ನು ನೋಡುತ್ತ ಮಾಯಾವತಿ ಭಾವುಕರಾದ ದೃಶ್ಯ ಕಂಡುಬಂದಿತು. ದೆಹಲಿ ಗದ್ದುಗೆಯನ್ನು ಮಾಯಾವತಿ ಏರಿದಂತೆ ನೃತ್ಯ ಪ್ರಸ್ತುತಪಡಿಸಲಾಗಿತ್ತು.

English summary
Lok Sabha Elections 2019:Bahujan Samaj Party (BSP) President Mayawathi spoke against congress and bjp in BSP rally.Mayawathi said that In this election, the story of Chowkidar, Congress drama ends.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X