ಮೈಸೂರು ಜನತೆಗೆ ಸಿಹಿಸುದ್ದಿ: ದೂರು ಸ್ವೀಕರಿಸಲು 'ಮೇಯರ್ ಆನ್ಲೈನ್ ಅದಾಲತ್' ಆರಂಭಿಸಿದ ಪಾಲಿಕೆ
ಕೆಲಸದೊತ್ತಡ ಸೇರಿದಂತೆ ನಾನಾ ಕಾರಣಗಳಿಂದ ಪಾಲಿಕೆ ಕಚೇರಿಗೆ ಬಾರಲು ಸಾಧ್ಯವಾಗದೇ ಇರುವ ಸಾರ್ವಜನಿಕರನ್ನು ದೃಷ್ಟಿಯಲ್ಲಿರಿಸಿಕೊಂಡು ಮೈಸೂರು ನಗರಪಾಲಿಕೆ 'ಮೇಯರ್ ಆನ್ಲೈನ್ ಅದಾಲತ್' ಆರಂಭಿಸಿದೆ.
ಮೈಸೂರು, ಫೆಬ್ರವರಿ 8: ತಂತ್ರಜ್ಞಾನ ನಮ್ಮ ಬದುಕನ್ನು ಬದಲಾಯಿಸಿದೆ. ಅಂಗೈ ಅಗಲದ ಮೊಬೈಲ್ ಇದ್ದರೆ ಸಾಕು ಜಗತ್ತಿನ ದರ್ಶನ ಆಗುತ್ತದೆ. ಮೈಸೂರು ನಗರ ಪಾಲಿಕೆ ಇದೀಗ ಸಾರ್ವಜನಿಕರ ದೂರುಗಳನ್ನು ಆನ್ಲೈನ್ನಲ್ಲಿ ಸ್ವೀಕರಿಸುವ ವಿನೂತನ ಕಾರ್ಯಕ್ಕೆ ಮುಂದಾಗಿದೆ.
ಸಾಮಾನ್ಯವಾಗಿ ಕ್ಯೂ ಆರ್ ಕೋಡ್ ಇದ್ದರೆ ಸಾಕು ಎಲ್ಲಿ ಬೇಕಾದರೂ ಹಣ ಸಂದಾಯ ಮಾಡಬಹುದು. ಡಿಜಿಟಲೀಕರಣ ಆದ ಮೇಲೆ ಜನ ಇ ಪೇಟೆಂಟ್ ಹೆಚ್ಚು ಮಾಡುತ್ತಿದ್ದಾರೆ. ಇದನ್ನು ಮನಗಂಡ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಸಾರ್ವಜನಿಕರಿಂದ ವಿನೂತನ ರೀತಿಯ ದೂರು ಸ್ವೀಕರಿಸಲು ಮುಂದಾಗಿದ್ದಾರೆ. ಜನರು ಇನ್ನುಮುಂದೆ ದೂರುಗಳನ್ನು ನೀಡಲಿ ಸರ್ಕಾರಿ ಕಚೇರಿಗಳಿಗೆಅಲೆಯಬೇಕಿಲ್ಲ. ಬದಲಿಗೆ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ದೂರು ಸಲ್ಲಿಸಬಹುದು.
ಸಾರ್ವಜನಿಕರ ಕಷ್ಟ ಸುಖ ವಿಚಾರಿಸಲು ಮೈಸೂರು ನಗರಪಾಲಿಕೆ ಅದಾಲತ್ ನಡೆಸುತ್ತಿತ್ತು. ಜನರು ತಮ್ಮ ಕುಂದುಕೊರತೆಗಳನ್ನು ಅಧಿಕಾರಿಗಳ ಮುಂದೆ ಹರವಿಕೊಳ್ಳುತ್ತಿದ್ದರು. ಮೈಸೂರು ಮಹಾನಗರ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಿ ಪರಿಹಾರವಾಗದೇ ಇರುವ ಸಮಸ್ಯೆಗಳಿಗೆ ಪಾಲಿಕೆ ಅದಾಲತ್ನಲ್ಲಿ ಪರಿಹಾರ ಸಿಗುತ್ತಿತ್ತು. ಆದರೆ, ಸಾರ್ವಜನಿಕರಿಗೊಂದು ಸಿಹಿ ಸುದ್ದಿ ಸಿಕ್ಕಿದೆ. ಮೈಸೂರು ನಗರಪಾಲಿಕೆಯ ಕಚೇರಿಗೆ ಬಾರದೆ ಆನ್ಲೈನ್ ಮೂಲಕವೂ ಸಹ ದೂರು ನೀಡಲು ನಗರಪಾಲಿಕೆ ಅವಕಾಶ ಮಾಡಿಕೊಟ್ಟಿದೆ.

ಕೆಲಸದೊತ್ತಡ ಸೇರಿದಂತೆ ನಾನಾ ಕಾರಣಗಳಿಂದ ಪಾಲಿಕೆ ಕಚೇರಿಗೆ ಬಾರಲು ಸಾಧ್ಯವಾಗದೇ ಇರುವ ಸಾರ್ವಜನಿಕರನ್ನು ದೃಷ್ಟಿಯಲ್ಲಿರಿಸಿಕೊಂಡು ಪಾಲಿಕೆಯ ಮೇಯರ್ ಶಿವಕುಮಾರ್ ಅವರು ಆನ್ಲೈನ್ ಮೂಲಕವೂ ಸಹ ದೂರು ನೀಡುವ ವ್ಯವಸ್ಥೆಯನ್ನು ಸಹ ಮಾಡಿದ್ದಾರೆ. ಇಂದಿನಿಂದ ''ಮೇಯರ್ ಆನ್ಲೈನ್ ಅದಾಲತ್'' ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಆನ್ಲೈನ್ ತಮ್ಮ ಬಗಹರಿಯದ ಸಮಸ್ಯೆ ಬಗ್ಗೆ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ಪ್ರತ್ಯೇಕವಾಗಿ ವೆಬ್ಸೈಟ್ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications