ಮೈಸೂರು ಜನತೆಗೆ ಸಿಹಿಸುದ್ದಿ: ದೂರು ಸ್ವೀಕರಿಸಲು 'ಮೇಯರ್ ಆನ್ಲೈನ್ ಅದಾಲತ್' ಆರಂಭಿಸಿದ ಪಾಲಿಕೆ
ಕೆಲಸದೊತ್ತಡ ಸೇರಿದಂತೆ ನಾನಾ ಕಾರಣಗಳಿಂದ ಪಾಲಿಕೆ ಕಚೇರಿಗೆ ಬಾರಲು ಸಾಧ್ಯವಾಗದೇ ಇರುವ ಸಾರ್ವಜನಿಕರನ್ನು ದೃಷ್ಟಿಯಲ್ಲಿರಿಸಿಕೊಂಡು ಮೈಸೂರು ನಗರಪಾಲಿಕೆ 'ಮೇಯರ್ ಆನ್ಲೈನ್ ಅದಾಲತ್' ಆರಂಭಿಸಿದೆ.
ಮೈಸೂರು, ಫೆಬ್ರವರಿ 8: ತಂತ್ರಜ್ಞಾನ ನಮ್ಮ ಬದುಕನ್ನು ಬದಲಾಯಿಸಿದೆ. ಅಂಗೈ ಅಗಲದ ಮೊಬೈಲ್ ಇದ್ದರೆ ಸಾಕು ಜಗತ್ತಿನ ದರ್ಶನ ಆಗುತ್ತದೆ. ಮೈಸೂರು ನಗರ ಪಾಲಿಕೆ ಇದೀಗ ಸಾರ್ವಜನಿಕರ ದೂರುಗಳನ್ನು ಆನ್ಲೈನ್ನಲ್ಲಿ ಸ್ವೀಕರಿಸುವ ವಿನೂತನ ಕಾರ್ಯಕ್ಕೆ ಮುಂದಾಗಿದೆ.
ಸಾಮಾನ್ಯವಾಗಿ ಕ್ಯೂ ಆರ್ ಕೋಡ್ ಇದ್ದರೆ ಸಾಕು ಎಲ್ಲಿ ಬೇಕಾದರೂ ಹಣ ಸಂದಾಯ ಮಾಡಬಹುದು. ಡಿಜಿಟಲೀಕರಣ ಆದ ಮೇಲೆ ಜನ ಇ ಪೇಟೆಂಟ್ ಹೆಚ್ಚು ಮಾಡುತ್ತಿದ್ದಾರೆ. ಇದನ್ನು ಮನಗಂಡ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಸಾರ್ವಜನಿಕರಿಂದ ವಿನೂತನ ರೀತಿಯ ದೂರು ಸ್ವೀಕರಿಸಲು ಮುಂದಾಗಿದ್ದಾರೆ. ಜನರು ಇನ್ನುಮುಂದೆ ದೂರುಗಳನ್ನು ನೀಡಲಿ ಸರ್ಕಾರಿ ಕಚೇರಿಗಳಿಗೆಅಲೆಯಬೇಕಿಲ್ಲ. ಬದಲಿಗೆ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ದೂರು ಸಲ್ಲಿಸಬಹುದು.
ಸಾರ್ವಜನಿಕರ ಕಷ್ಟ ಸುಖ ವಿಚಾರಿಸಲು ಮೈಸೂರು ನಗರಪಾಲಿಕೆ ಅದಾಲತ್ ನಡೆಸುತ್ತಿತ್ತು. ಜನರು ತಮ್ಮ ಕುಂದುಕೊರತೆಗಳನ್ನು ಅಧಿಕಾರಿಗಳ ಮುಂದೆ ಹರವಿಕೊಳ್ಳುತ್ತಿದ್ದರು. ಮೈಸೂರು ಮಹಾನಗರ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಿ ಪರಿಹಾರವಾಗದೇ ಇರುವ ಸಮಸ್ಯೆಗಳಿಗೆ ಪಾಲಿಕೆ ಅದಾಲತ್ನಲ್ಲಿ ಪರಿಹಾರ ಸಿಗುತ್ತಿತ್ತು. ಆದರೆ, ಸಾರ್ವಜನಿಕರಿಗೊಂದು ಸಿಹಿ ಸುದ್ದಿ ಸಿಕ್ಕಿದೆ. ಮೈಸೂರು ನಗರಪಾಲಿಕೆಯ ಕಚೇರಿಗೆ ಬಾರದೆ ಆನ್ಲೈನ್ ಮೂಲಕವೂ ಸಹ ದೂರು ನೀಡಲು ನಗರಪಾಲಿಕೆ ಅವಕಾಶ ಮಾಡಿಕೊಟ್ಟಿದೆ.

ಕೆಲಸದೊತ್ತಡ ಸೇರಿದಂತೆ ನಾನಾ ಕಾರಣಗಳಿಂದ ಪಾಲಿಕೆ ಕಚೇರಿಗೆ ಬಾರಲು ಸಾಧ್ಯವಾಗದೇ ಇರುವ ಸಾರ್ವಜನಿಕರನ್ನು ದೃಷ್ಟಿಯಲ್ಲಿರಿಸಿಕೊಂಡು ಪಾಲಿಕೆಯ ಮೇಯರ್ ಶಿವಕುಮಾರ್ ಅವರು ಆನ್ಲೈನ್ ಮೂಲಕವೂ ಸಹ ದೂರು ನೀಡುವ ವ್ಯವಸ್ಥೆಯನ್ನು ಸಹ ಮಾಡಿದ್ದಾರೆ. ಇಂದಿನಿಂದ ''ಮೇಯರ್ ಆನ್ಲೈನ್ ಅದಾಲತ್'' ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಆನ್ಲೈನ್ ತಮ್ಮ ಬಗಹರಿಯದ ಸಮಸ್ಯೆ ಬಗ್ಗೆ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ಪ್ರತ್ಯೇಕವಾಗಿ ವೆಬ್ಸೈಟ್ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications