ಅಂಗೈನಲ್ಲಿ ನಾಡಹಬ್ಬ ದಸರಾದ ಸಕಲ ಮಾಹಿತಿ
ಮೈಸೂರು. ಆ. 25 : ನಾಡಹಬ್ಬ ದಸರಾ ಕುರಿತ ನೂತನ ವೆಬ್ ಸೈಟ್ ಅನಾವರಣವಾಗಿದೆ. ಪ್ರವಾಸಿಗರಿಗೆ ಅನಕೂಲವಾಗುವ ಎಲ್ಲ ಮಾಹಿತಿಯನ್ನು ಇದರಲ್ಲಿ ಅಳವಡಿಸಲಾಗಿದೆ.
ಕರ್ನಾಟಕ ಸರ್ಕಾರ 2014ರ ದಸರಾಕ್ಕೆ ಸಂಬಂಧಿಸಿ ಅಧಿಕೃತ ವೆಬ್ ಸೈಟ್ ಅನಾವರಣ ಮಾಡಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ. ಅಲ್ಲದೇ ಫೇಸ್ ಬುಕ್, ಟ್ವಿಟ್ಟರ್ ಮೂಲಕವು ಫಾಲೋ ಮಾಡಬಹುದು.

ನಾಡಹಬ್ಬದ ಎಲ್ಲ ಮಾಹಿತಿ ನೀಡುವ 'ದಸರಾ ವೆಬ್ ಸೈಟ್'ಗೆ ಮೈಸೂರು ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್ ಇತ್ತೀಚೆಗೆ ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ದಸರಾಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿ ಈ ವೆಬ್ಸೈಟ್ನಲ್ಲಿ ಲಭ್ಯ. ಸಾರ್ವಜನಿಕರು, ಪ್ರವಾಸಿಗರು ಅಂತರ್ಜಾಲ ತಾಣ ಪ್ರವೇಶಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ದಸರಾ ಕಾರ್ಯಕ್ರಮಗಳು, ಪ್ರವಾಸಿ ತಾಣಗಳ ಮಾಹಿತಿ, ಜಿಲ್ಲೆಯ ನಕಾಶೆ, ಹೋಟೆಲ್ಗಳು ಮತ್ತು ಇಲ್ಲಿಯವರೆಗೆ ನಡೆದ ದಸರಾ ಮಹೋತ್ಸವದ ಚಿತ್ರಗಳನ್ನು ನೋಡಬಹುದಾಗಿದೆ ಎಂದು ತಿಳಿಸಿದರು.
ಅಧಿಕೃತ ಜಾಲತಾಣವಾಗಿದ್ದು ಈ ಬಾರಿ ಐಪ್ಯಾಡ್, ಲ್ಯಾಪ್ ಟಾಪ್, ಮತ್ತು ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು. 9980612014 ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡರೆ ವಾಟ್ಸಾಫ್ ಮುಖಾಂತರ ದಸರಾದ ಅಪ್ಡೇಟ್ಸ್ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗೆ ದಸರಾ ಸಹಾಯವಾಣಿ 1077ಕ್ಕೆ ಕರೆ ಮಾಡಬಹುದು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications