ದಸರಾ ಅತಿಥಿಗಳಿಗೆ ಔಷಧೀಯ ಸಸ್ಯಗಳ ಸ್ವಾಗತ
ಮೈಸೂರು, ಸೆ.1 : ಮೈಸೂರು ದಸರಾಕ್ಕೆ ಆಗಮಿಸುವ ವಿಐಪಿಗಳು ಮತ್ತು ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸುವ ಸಂಪ್ರದಾಯವನ್ನು ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಬಾರಿಯ ದಸರಾಕ್ಕೆ ಆಗಮಿಸುವವರ ಕೈಗೆ ಔಷಧೀಯ ಸಸ್ಯ ನೀಡಿ ಸ್ವಾಗತಿಸಲಾಗುತ್ತದೆ.
ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಪುಷ್ಪಾವತಿ ಅಮರನಾಥ್ ಅವರು ಇಂತಹ ವಿನೂತನ ಪ್ರಯತ್ನ ಆರಂಭಿಸಿದ್ದಾರೆ. ದಸರಾಕ್ಕೆ ಆಗಮಿಸುವ ವಿಐಪಿಗಳು ಮತ್ತು ಅತಿಥಿಗಳಿಗೆ ಈ ಬಾರಿ ಔಷಧೀಯ ಸಸ್ಯವನ್ನು ಹೊಂದಿರುವ ಪಾಟ್ಅನ್ನು ನೀಡಿ ಸ್ವಾಗತ ಕೋರಲಾಗುತ್ತದೆ.

ಈಗಾಗಲೇ ಅತಿಥಿಗಳಿಗೆ ಔಷಧೀಯ ಸಸ್ಯ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಜೊತೆ ಪುಷ್ಪಾವತಿ ಅಮರನಾಥ್ ಮಾತುಕತೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರು ವಿನೂತನ ಪ್ರಯತ್ನಕ್ಕೆ ಒಪ್ಪಿಗೆ ನೀಡಿದ್ದಾರೆ. [ಗುತ್ತಿಗೆದಾರನಿಗೆ ಬೆದರಿಕೆ ಕರೆ]
ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ತಯಾರಿ ನಡೆಸಿರುವ ಜಿಲ್ಲಾಡಳಿತ, ಈಗಾಗಲೇ 5000 ಪಾಟ್ಗಳನ್ನು ಖರೀದಿಸಲು ಸಿದ್ಧತೆ ಆರಂಭಿಸಿದೆ. ದಸರಾ ಲಾಂಛನ ಹೊಂದಿರುವ ಪಾಟ್ಗಳಲ್ಲಿ ಔಷಧೀಯ ಸಸ್ಯಗಳನ್ನು ಇಟ್ಟು ಅತಿಥಿಗಳಿಗೆ ನೀಡಿ ಅವರನ್ನು ದಸರಾಕ್ಕೆ ಸ್ವಾಗತಿಸಲಾಗುತ್ತದೆ.
ಹೂಗುಚ್ಛ ನೀಡಿದರೆ ಅದನ್ನು ಅತಿಥಿಗಳನ್ನು ಮತೆತು ಬಿಡಬಹುದು ಅಥವ ಅಲ್ಲೇ ಬಿಟ್ಟು ಹೋಗಬಹುದು ಆದ್ದರಿಂದ ಔಷಧೀಯ ಸಸ್ಯಗಳನ್ನು ನೀಡುತ್ತಿದ್ದು, ಇದನ್ನು ತೆಗೆದುಕೊಂಡು ಹೋಗುತ್ತಾರೆ ಎಂದು ಪುಷ್ಪಾವತಿ ಅಮರನಾಥ್ ಹೇಳಿದ್ದಾರೆ. [ದಸರಾ ಮಾಹಿತಿ ಬೇಕೆ ಇಲ್ಲಿ ಕ್ಲಿಕ್ ಮಾಡಿ]
ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಔಷಧ ವನ ನಿರ್ಮಾಣ ಮಾಡುವ ಕನಸು ಷುಪ್ಪಾವತಿ ಅಮರನಾಥ್ ಅವರಿಗಿದೆ. ಹಾಗೆಯೇ ತಂಬಾಕು ರಹಿತ ದಸರಾವನ್ನು ಆಚರಿಸಲು ಅವರು ನಿರ್ಧರಿಸಿದ್ದು, ಧೂಮಪಾನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications