ಸಭ್ಯನಂತೆ ನಟಿಸುತ್ತಾ ಕನ್ನ ಹಾಕುತ್ತಿದ್ದ ಈ ಪಿರಿಯಾಪಟ್ಟಣ ವ್ಯಾಪಾರಿ...
ಮೈಸೂರು, ಫೆಬ್ರವರಿ 22: ಪ್ರಾವಿಷನ್ ಸ್ಟೋರ್ ಮತ್ತು ಫ್ಲೋರ್ ಮಿಲ್ ನಡೆಸುತ್ತಿದ್ದ ವ್ಯಾಪಾರಿ ಸಭ್ಯನಂತೆ ನಟಿಸುತ್ತಾ, ಒಳಗೊಳಗೆ ಕಳ್ಳತನವನ್ನೂ ಮಾಡುತ್ತಿದ್ದ ಸಂಗತಿ ಪಿರಿಯಾಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬರೇ ಇದ್ದುದ್ದನ್ನು ಗಮನಿಸಿ ಮನೆಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ಮಾಡಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದಾಗ, ಆತನ ಇನ್ನಷ್ಟು ಕಳ್ಳತನ ಪ್ರಕರಣಗಳು ಹೊರಗೆ ಬಂದಿವೆ. ಅಲ್ಲಿನ ಶಿವಪ್ಪ ಬಡಾವಣೆಯ ರಸ್ತೆಯಲ್ಲಿ ಪ್ರಾವಿಷನ್ ಸ್ಟೋರ್ ಮತ್ತು ಫ್ಲೋರ್ ಮಿಲ್ ನಡೆಸುತ್ತಿದ್ದ ಮಲ್ಲಿಕಾರ್ಜುನ ಎಂಬಾತನೇ ಕಳ್ಳನಾಗಿದ್ದು, ಈತ ಮೇಲ್ನೋಟಕ್ಕೆ ಸಭ್ಯನಂತೆ ಕಾಣಿಸುತ್ತಿದ್ದನು. ವ್ಯಾಪಾರ ಮಾಡಿಕೊಂಡು ತನ್ನಪಾಡಿಗೆ ತಾನು ಬದುಕುತ್ತಿದ್ದಾನೆ ಎಂಬಂತೆ ಸಾರ್ವಜನಿಕ ವಲಯದಲ್ಲಿ ಬಿಂಬಿಸಿಕೊಂಡಿದ್ದನು.
ಮಲ್ಲಿಕಾರ್ಜುನ ಪಿರಿಯಾಪಟ್ಟಣದಲ್ಲಿ ಆಶಾ ಎಂಬುವರು ಒಬ್ಬರೇ ಇದ್ದಾಗ ಕುಡಿಯಲು ನೀರು ಕೇಳಿಕೊಂಡು ಅವರ ಮನೆಗೆ ಹೋಗಿದ್ದಾನೆ. ನೀರಿನ ಜೊತೆ ಉಪ್ಪು ನೀಡುವಂತೆಯೂ ಕೇಳಿಕೊಂಡಿದ್ದಾನೆ. ಉಪ್ಪಿನ ಡಬ್ಬಿ ತರಲು ಆಶಾ ಒಳಗೆ ಹೋದಾಗ ಮನೆ ಬಾಗಿಲು ಹಾಕಿಕೊಂಡು ಉಪ್ಪಿನ ಗಾಜಿನ ಡಬ್ಬಿಯಿಂದಲೇ ಆಶಾ ಮೇಲೆ ಹಲ್ಲೆ ನಡೆಸಿ, ನೆಲಕ್ಕೆ ಬೀಳಿಸಿ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಿತ್ತುಕೊಂಡು ದಾರದಿಂದ ಕತ್ತು ಬಿಗಿದು ಕೊಲೆ ಮಾಡಲು ಮುಂದಾಗಿದ್ದಾನೆ. ಈ ಸಂದರ್ಭ ಆಶಾ ಕಿರುಚಿಕೊಂಡಿದ್ದು, ಅಕ್ಕಪಕ್ಕದ ಮನೆಯವರು ದೌಡಾಯಿಸಿದ್ದಾರೆ.

ಇದರಿಂದ ಗಾಬರಿಗೊಂಡು ಮಲ್ಲಿಕಾರ್ಜುನ ಓಡಲು ಪ್ರಯತ್ನಿಸಿದ್ದನು. ಆಗ ಆಶಾ ಅವರು ಮುಂಬಾಗಿಲು ತೆಗೆದು ಸುತ್ತಲಿನವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಅವರು ಮಲ್ಲಿಕಾರ್ಜುನನ್ನು ಗೃಹಬಂಧನದಲ್ಲಿರಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದಾದ ನಂತರ ಆರೋಪಿ ಮಲ್ಲಿಕಾರ್ಜುನನನ್ನು ಪೊಲೀಸರು 4 ದಿನಗಳ ಕಾಲ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ತಾನು ಇನ್ನಷ್ಟು ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications