ಅದ್ಧೂರಿಯ ಮೈಸೂರು ದಸರಾ; ಜಂಬೂಸವಾರಿಗೆ ಸಾಕ್ಷಿಯಾದ ಲಕ್ಷಾಂತರ ಜನ
ಮೈಸೂರು, ಅಕ್ಟೋಬರ್ 8: ಐತಿಹಾಸಿಕ 409ನೇ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಲಕ್ಷಾಂತರ ಮಂದಿ ಮಂಗಳವಾರ ಸಾಕ್ಷಿಯಾದರು.
ಈ ಒಂದು ಅಪರೂಪದ ಕ್ಷಣಕ್ಕಾಗಿ ವರ್ಷದಿಂದ ಕಾಯುತ್ತಿದ್ದ ಮಂದಿ ಚಿನ್ನದ ಅರ್ಜುನ ಹೊತ್ತ ಅಂಬಾರಿಯಲ್ಲಿ ವಿರಾಜಮಾನವಾದ ತಾಯಿ ಚಾಮುಂಡೇಶ್ವರಿಯನ್ನು ಕಣ್ಣು ತುಂಬಿಸಿಕೊಂಡು ಕೃತಾರ್ಥರಾದರು.

ಜಂಬೂಸವಾರಿ ಕಣ್ತುಂಬಿಕೊಂಡ ಜನ
ಬೆಳಗ್ಗಿನಿಂದಲೇ ಸುತ್ತಮುತ್ತಲಿನ ಹಳ್ಳಿಗಳಿಂದ, ಮೊದಲೇ ನಗರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಲಕ್ಷಾಂತರ ಮಂದಿ ಅರಮನೆ ಹಾಗೂ ಜಂಬೂಸವಾರಿ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಜಮಾಯಿಸಿದ್ದರು. ಪಾಸ್ ಪಡೆದವರು ಕಾಯ್ದಿರಿಸಿದ ಸ್ಥಳಗಳಲ್ಲಿ ಆಸೀನರಾದರೆ, ಉಳಿದವರ ಪೈಕಿ ಕೆಲವರು ರಸ್ತೆ ಬದಿಯಲ್ಲಿ ಸೂಕ್ತವಾದ ಜಾಗವನ್ನು ಆರಿಸಿಕೊಂಡು ಆಸೀನರಾಗಿದ್ದರು. ಮತ್ತೆ ಕೆಲವರು ಕಟ್ಟಡ ಹಾಗೂ ಮರಗಳ ಮೇಲೆ ಹತ್ತಿ ಕುಳಿತು ಜಂಬೂಸವಾರಿಯನ್ನು ವೀಕ್ಷಿಸಿದರು.

ಕರಿತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ
ಸಂಪ್ರದಾಯದಂತೆ ಬೆಳಿಗ್ಗೆ ಅರಮನೆ ದರ್ಬಾರ್ ಹಾಲ್ನಲ್ಲಿ ಸಾಂಪ್ರದಾಯಿಕ ವಿಧಿವಿಧಾನ ಮುಗಿಸಿದ ಯದುವೀರ್ ಒಡೆಯರ್ ಅವರು, ಅರಮನೆಯಿಂದ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕರಿತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಬನ್ನಿಪೂಜೆ ನೆರವೇರಿಸಿ ಬಂದ ಬಳಿಕ ಒಡೆಯರ್ ಅವರ ಅಪ್ಪಣೆ ಪಡೆದ ಬಳಿಕ ಜಂಬೂಸವಾರಿಗೆ ಮುಂದಿನ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಮಧ್ಯಾಹ್ನ ಮುಖ್ಯಮಂತ್ರಿಯಿಂದ ನಂದಿ ಧ್ವಜಕ್ಕೆ ಪೂಜೆ
ಮಧ್ಯಾಹ್ನ 2.09ಕ್ಕೆ ಬಲರಾಮ ದ್ವಾರದ ಶ್ರೀಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೂಜೆ ನೆರವೇರಿಸಿದರು. ಈ ಸಂದರ್ಭ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಈ ವೇಳೆ ಸ್ತಬ್ಧ ಚಿತ್ರ ಮತ್ತು ಜಾನಪದ ಕಲಾ ತಂಡಗಳು ಸಾಗಿದವು.

ಚಾಮುಂಡಿ ದೇವಿ ಮೆರವಣಿಗೆಗೆ ಜನರ ಜೈಕಾರ
ಸಂಜೆ 4.17ರ ಕುಂಭ ಲಗ್ನದಲ್ಲಿ ಅರ್ಜುನ ಹೊತ್ತ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುಷ್ಪಾರ್ಚನೆ ನೆರವೇರಿಸಿದರು. ಇದೇ ವೇಳೆ ಕುಶಾಲತೋಪು ಸಿಡಿಸಲಾಯಿತು. ಬಳಿಕ ಅರ್ಜುನನಿಗೆ ಕಾವೇರಿ ಮತ್ತು ವಿಜಯ ಎಂಬ ಹೆಣ್ಣಾನೆಗಳು ಕುಮ್ಕಿ ಆನೆಗಳಾಗಿ ಮೆರವಣಿಗೆಯುದ್ದಕ್ಕೂ ಸಾಗಿದವು. ಇನ್ನು ಅಶ್ವದಳ, ಪೊಲೀಸ್ ಕವಾಯತ್ ಸಾಥ್ ನೀಡಿತು. ದಾರಿಯುದ್ದಕ್ಕೂ ಇಕ್ಕೆಲಗಳಲ್ಲಿ ಕುಳಿತಿದ್ದ ಜನ ತಾಯಿ ಚಾಮುಂಡೇಶ್ವರಿಗೆ ಜೈಕಾರ ಕೂಗುತ್ತಾ ಕಣ್ತುಂಬಿಕೊಂಡರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications