ಉತ್ತರ ಭಾರತದ ಖನಿಜ ಸಂಪತ್ತಿನಿಂದಲೇ ದಕ್ಷಿಣದ ಬೆಳವಣಿಗೆ: ಸಂಸದ ಪ್ರತಾಪ್ ಸಿಂಹ ಹೊಸ ಸಂಶೋಧನೆ
ತೆರಿಗೆ ಹಂಚಿಕೆ ವಿಚಾರವಾಗಿ ಉತ್ತರ ಹಾಗೂ ದಕ್ಷಿಣದ ರಾಜ್ಯಗಳ ನಡುವೆ ಜಟಾಪಟಿ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಗಿದೆ. ಇದೇ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ ಸಿಂಹ ದಕ್ಷಿಣ ರಾಜ್ಯಗಳ ಬೆಳವಣಿಗೆಗೆ ಉತ್ತರ ರಾಜ್ಯಗಳ ಖನಿಜ ಸಂಪತ್ತು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ದಕ್ಷಿಣ ಭಾರತ ಮತ್ತು ಬೆಂಗಳೂರಿನ ಬೆಳವಣಿಗೆಗೆ ಉತ್ತರ ಭಾರತ ಕಾರಣವಾಗಿದೆ. ಇಲ್ಲಿನ ಕೈಗಾರಿಕೀಕರಣವು ಖನಿಜ ಸಮೃದ್ಧ ಉತ್ತರ ಭಾರತದ ರಾಜ್ಯಗಳಿಂದ ಸುಗಮವಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 1950 ರ ದಶಕದಲ್ಲಿ ಜವಾಹರಲಾಲ್ ನೆಹರು ಅವರ ಅವಧಿಯಲ್ಲಿ ಸರಕು ಸಮೀಕರಣದ ಪರಿಕಲ್ಪನೆಯನ್ನು ಅಳವಡಿಸಲಾಯಿತು. ಈ ಸರಕು ಸಾಗಣೆ ವೆಚ್ಚವನ್ನು ಕೇಂದ್ರದಿಂದ ಭರಿಸಲಾಯಿತು. ಈ ಮೂಲಕ ಒಂದು ರಾಜ್ಯದಲ್ಲಿ ಲಭ್ಯವಿರುವ ಖನಿಜಗಳು ದೇಶದಾದ್ಯಂತ ಲಭ್ಯವಾಗುವಂತೆ ಖಾತ್ರಿಪಡಿಸಲಾಯಿತು. ಕೈಗಾರಿಕೆಗಳನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಇದನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ಐಟಿ ಅಥವಾ ಟೆಕ್ ಹಬ್ ಆಗಿ ಬೆಳೆಯಲು ಕೇಂದ್ರ ಸರ್ಕಾರ ಕಾರಣವಾಗಿದೆ. ಎಚ್ಎಎಲ್, ಬಿಇಎಲ್ ಮುಂತಾದ ಸಾರ್ವಜನಿಕ ವಲಯದ ಘಟಕಗಳನ್ನು ಸ್ಥಾಪಿಸಿದ್ದರಿಂದ ಕೈಗಾರಿಕಾ ಅಭಿವೃದ್ಧಿಯಾಯಿತು. ಇದು ಪರಿಸರ ವ್ಯವಸ್ಥೆಯನ್ನು ರಚಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.
ಇದಲ್ಲದೆ, ದೇಶದ ಗಡಿಗಳಲ್ಲಿ ಪಾಕಿಸ್ತಾನ ಮತ್ತು ಚೀನಾ ಎರಡರಿಂದಲೂ ಬೆದರಿಕೆ ಇದೆ. ಭದ್ರತಾ ಕಾರಣಗಳಿಗಾಗಿ ಅಂತಹ ಕೈಗಾರಿಕೆಗಳನ್ನು ಸ್ಥಾಪಿಸಲು ದಕ್ಷಿಣ ಭಾರತವು ಆದ್ಯತೆಯ ಸ್ಥಳವಾಗಿದೆ ಎಂದು ಪ್ರತಾಪ ಸಿಂಹ ಪ್ರತಿಪಾದಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಪೂರೈಸಲು ಸಂಪನ್ಮೂಲಗಳನ್ನು ಚಾನೆಲೈಸ್ ಮಾಡಲಾಗುತ್ತಿರುವುದರಿಂದ ಅಭಿವೃದ್ಧಿಗೆ ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಅವರು ಆರೋಪಿಸಿದ್ದಾರೆ.
14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದರ ಅರಿವಿದ್ದರೂ ಕೇಂದ್ರದ ಮೇಲೆ ಆರೋಪ ಹೊರಿಸಿ ಗಮನ ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ
ಕರ್ನಾಟಕ ಮತ್ತು ಇತರ ದಕ್ಷಿಣ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಉತ್ತರ-ದಕ್ಷಿಣ ವಿಭಜನೆಯನ್ನು ಕೆರಳಿಸುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ ಎಂಬ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ದೇಶ ಒಗ್ಗಟ್ಟಿನಿಂದ ಇರಬೇಕೆಂದು ಕಾಂಗ್ರೆಸ್ ಬಯಸುತ್ತದೆ ಆದರೆ ದಕ್ಷಿಣದ ರಾಜ್ಯಗಳ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಕರ್ನಾಟಕ ಮತ್ತು ಇತರ ದಕ್ಷಿಣದ ರಾಜ್ಯಗಳಿಗೆ ಮಾಡುತ್ತಿರುವ ತಾರತಮ್ಯದ ಸಮಸ್ಯೆಯನ್ನು ನಾವು ಎತ್ತುತ್ತಿದ್ದೇವೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications