Get Updates
Get notified of breaking news, exclusive insights, and must-see stories!

ಉತ್ತರ ಭಾರತದ ಖನಿಜ ಸಂಪತ್ತಿನಿಂದಲೇ ದಕ್ಷಿಣದ ಬೆಳವಣಿಗೆ: ಸಂಸದ ಪ್ರತಾಪ್ ಸಿಂಹ ಹೊಸ ಸಂಶೋಧನೆ

ತೆರಿಗೆ ಹಂಚಿಕೆ ವಿಚಾರವಾಗಿ ಉತ್ತರ ಹಾಗೂ ದಕ್ಷಿಣದ ರಾಜ್ಯಗಳ ನಡುವೆ ಜಟಾಪಟಿ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಗಿದೆ. ಇದೇ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ ಸಿಂಹ ದಕ್ಷಿಣ ರಾಜ್ಯಗಳ ಬೆಳವಣಿಗೆಗೆ ಉತ್ತರ ರಾಜ್ಯಗಳ ಖನಿಜ ಸಂಪತ್ತು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ದಕ್ಷಿಣ ಭಾರತ ಮತ್ತು ಬೆಂಗಳೂರಿನ ಬೆಳವಣಿಗೆಗೆ ಉತ್ತರ ಭಾರತ ಕಾರಣವಾಗಿದೆ. ಇಲ್ಲಿನ ಕೈಗಾರಿಕೀಕರಣವು ಖನಿಜ ಸಮೃದ್ಧ ಉತ್ತರ ಭಾರತದ ರಾಜ್ಯಗಳಿಂದ ಸುಗಮವಾಗಿದೆ ಎಂದು ಹೇಳಿದ್ದಾರೆ.

Mineral-rich North India helped the South grow, says BJP MP Pratap Simha

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 1950 ರ ದಶಕದಲ್ಲಿ ಜವಾಹರಲಾಲ್ ನೆಹರು ಅವರ ಅವಧಿಯಲ್ಲಿ ಸರಕು ಸಮೀಕರಣದ ಪರಿಕಲ್ಪನೆಯನ್ನು ಅಳವಡಿಸಲಾಯಿತು. ಈ ಸರಕು ಸಾಗಣೆ ವೆಚ್ಚವನ್ನು ಕೇಂದ್ರದಿಂದ ಭರಿಸಲಾಯಿತು. ಈ ಮೂಲಕ ಒಂದು ರಾಜ್ಯದಲ್ಲಿ ಲಭ್ಯವಿರುವ ಖನಿಜಗಳು ದೇಶದಾದ್ಯಂತ ಲಭ್ಯವಾಗುವಂತೆ ಖಾತ್ರಿಪಡಿಸಲಾಯಿತು. ಕೈಗಾರಿಕೆಗಳನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಇದನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಐಟಿ ಅಥವಾ ಟೆಕ್ ಹಬ್ ಆಗಿ ಬೆಳೆಯಲು ಕೇಂದ್ರ ಸರ್ಕಾರ ಕಾರಣವಾಗಿದೆ. ಎಚ್‌ಎಎಲ್, ಬಿಇಎಲ್ ಮುಂತಾದ ಸಾರ್ವಜನಿಕ ವಲಯದ ಘಟಕಗಳನ್ನು ಸ್ಥಾಪಿಸಿದ್ದರಿಂದ ಕೈಗಾರಿಕಾ ಅಭಿವೃದ್ಧಿಯಾಯಿತು. ಇದು ಪರಿಸರ ವ್ಯವಸ್ಥೆಯನ್ನು ರಚಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ದೇಶದ ಗಡಿಗಳಲ್ಲಿ ಪಾಕಿಸ್ತಾನ ಮತ್ತು ಚೀನಾ ಎರಡರಿಂದಲೂ ಬೆದರಿಕೆ ಇದೆ. ಭದ್ರತಾ ಕಾರಣಗಳಿಗಾಗಿ ಅಂತಹ ಕೈಗಾರಿಕೆಗಳನ್ನು ಸ್ಥಾಪಿಸಲು ದಕ್ಷಿಣ ಭಾರತವು ಆದ್ಯತೆಯ ಸ್ಥಳವಾಗಿದೆ ಎಂದು ಪ್ರತಾಪ ಸಿಂಹ ಪ್ರತಿಪಾದಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಪೂರೈಸಲು ಸಂಪನ್ಮೂಲಗಳನ್ನು ಚಾನೆಲೈಸ್ ಮಾಡಲಾಗುತ್ತಿರುವುದರಿಂದ ಅಭಿವೃದ್ಧಿಗೆ ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಅವರು ಆರೋಪಿಸಿದ್ದಾರೆ.

14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದರ ಅರಿವಿದ್ದರೂ ಕೇಂದ್ರದ ಮೇಲೆ ಆರೋಪ ಹೊರಿಸಿ ಗಮನ ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಕರ್ನಾಟಕ ಮತ್ತು ಇತರ ದಕ್ಷಿಣ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಉತ್ತರ-ದಕ್ಷಿಣ ವಿಭಜನೆಯನ್ನು ಕೆರಳಿಸುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ ಎಂಬ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ದೇಶ ಒಗ್ಗಟ್ಟಿನಿಂದ ಇರಬೇಕೆಂದು ಕಾಂಗ್ರೆಸ್ ಬಯಸುತ್ತದೆ ಆದರೆ ದಕ್ಷಿಣದ ರಾಜ್ಯಗಳ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕರ್ನಾಟಕ ಮತ್ತು ಇತರ ದಕ್ಷಿಣದ ರಾಜ್ಯಗಳಿಗೆ ಮಾಡುತ್ತಿರುವ ತಾರತಮ್ಯದ ಸಮಸ್ಯೆಯನ್ನು ನಾವು ಎತ್ತುತ್ತಿದ್ದೇವೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+