ಕಾಂಗ್ರೆಸ್ ಕೈ ಕೊಟ್ಟರೂ, ಬಿಜೆಪಿ ಸಿದ್ದರಾಮಯ್ಯರವರ ಕೈ ಹಿಡಿಯಲಿದೆ: ಸಿ.ಟಿ. ರವಿ
Recommended Video
ಮೈಸೂರು, ಸೆಪ್ಟೆಂಬರ್ 10: "ಮಾಜಿ ಸಿಎಂ ಸಿದ್ಧರಾಮಯ್ಯರವರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಮಾತ್ರ ಕೈ ಬಿಡಲ್ಲ. ಸಿದ್ದರಾಮಯ್ಯರನ್ನು ಸೇರಿಸಿಕೊಂಡೇ ಈ ಬಾರಿ ದಸರಾ ಆಚರಣೆ ಮಾಡುತ್ತೇವೆ" ಎಂದು ತಿಳಿಸಿದ್ದಾರೆ ಸಚಿವ ಸಿ.ಟಿ ರವಿ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯರನ್ನು ಕಾಂಗ್ರೆಸ್ ಬಿಟ್ಟರೂ ನಾವು ಬಿಡಲ್ಲ. ಅವರು ನನ್ನ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯನವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ" ಎಂದರು.

ಇದೇ ವೇಳೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ, "ಭ್ರಷ್ಟಾಚಾರ ನಡೆಸದಿದ್ದರೆ ಭಯ ಯಾಕೆ ಬೀಳಬೇಕು? ಯಾರು ಭ್ರಷ್ಟಾಚಾರ ಮಾಡಿರುತ್ತಾರೋ ಅವರಿಗೆ ಭಯ ಇರುತ್ತದೆ. ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡೋದೆ ತಪ್ಪೆಂದು ಬಿಂಬಿಸುತ್ತಿದ್ದಾರೆ. ಸಮುದಾಯದ ವಿರುದ್ಧ ಎಂದು ಹೇಳುತ್ತಿದ್ದಾರೆ. ಅದರೆ ನಾನು ಕೂಡ ಒಕ್ಕಲಿಗ ಸಮುದಾಯದವನು. ನನ್ನ ಸಮುದಾಯದ ನಾಯಕರಿಗೆ ಹೇಳುತ್ತೇನೆ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಭಾವನಾತ್ಮಕವಾಗಿ ಯೋಚನೆ ಮಾಡಬೇಡಿ. ವಾಸ್ತವಿಕವಾಗಿ ಯೋಚನೆ ಮಾಡಿ. ಬಂಧನ ಸಮುದಾಯದ ವಿರುದ್ಧ ಅಂತ ಯಾಕೆ ಹೇಳಬೇಕು? ನನ್ನ ಮನೆಯಲ್ಲಿ 10 ಕೋಟಿ ದುಡ್ಡು ಸಿಕ್ಕರೆ ನಾನು ಪ್ರಾಮಾಣಿಕ ಎಂದು ಹೇಳಿಕೊಳ್ಳೋಕೆ ಆಗುತ್ತಾ? ನನ್ನ ಆಸ್ತಿ 18 ಎಕರೆ ಇದೆ. ಅದು 180 ಎಕರೆ ಆದರೆ ಅದಕ್ಕೆ ಉತ್ತರ ಕೊಡಬೇಕು. ಅದು 1880 ಎಕರೆ ಆದರೂ ಜನರಿಗೆ ಉತ್ತರ ಕೊಡಬಾರದೇ" ಎಂದು ಪ್ರಶ್ನಿಸಿದರು.

"ಕೆಆರ್ ಎಸ್ ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾಗುವ ಯೋಜನೆಗೆ ವಿರೋಧ ಮಾಡಲ್ಲ. ಡಿಸ್ನಿಲ್ಯಾಂಡ್ ಯೋಜನೆ ನೀಲಿ ನಕ್ಷೆಯಲ್ಲೇ ಇದೆ. ಇದು ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಯೋಜನೆಯಲ್ಲ" ಎಂದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications