ಒಕ್ಕಲಿಗರಿಗೆ ಆದರ್ಶ ಯಾರಾಗಬೇಕು? ಪ್ರತಿಭಟನೆ ವಿರುದ್ಧ ಮಾತಾಡಿದ ಸಚಿವ ಸಿ.ಟಿ ರವಿ
ಮೈಸೂರು, ಸೆಪ್ಟೆಂಬರ್ 11: ಒಕ್ಕಲಿಗ ಸಮುದಾಯದವರು ಡಿ.ಕೆ. ಶಿವಕುಮಾರ್ ಬಂಧನದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಸಚಿವ ಸಿ.ಟಿ. ರವಿ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಒಕ್ಕಲಿಗರಿಗೆ ಯಾರು ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಲಿ. ಒಕ್ಕಲಿಗರಿಗೆ ಶಾಂತವೇರಿ ಗೋಪಾಲಗೌಡರು, ಕುವೆಂಪು, ಕೆಂಗಲ್ ಹನುಮಂತಯ್ಯ ಅವರಂಥ ಮಹನೀಯರು ಆದರ್ಶರಾಗಬೇಕೋ ಅಥವಾ ಇನ್ಯಾರು ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನಿಸಲಿ" ಎಂದು ತಿರುಗೇಟು ನೀಡಿದ್ದಾರೆ.

"ಜಾರಿ ನಿರ್ದೇಶನಾಲಯದಲ್ಲಿ ಯಾವುದೇ ಜಾತಿ ಇಲ್ಲ. ಇದನ್ನು ಹುಟ್ಟುಹಾಕಿದವರು ಯಾರು? ಭಾರತೀಯ ಜನತಾ ಪಾರ್ಟಿ ಇಡಿ ಹುಟ್ಟುಹಾಕಿಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಸಂಬಂಧ ಇಡಿ ತನಿಖೆ ಮಾಡುತ್ತಿದೆ. ತನಿಖೆ ಮಾಡೋದೇ ತಪ್ಪು ಎಂದರೆ ಹೇಗೆ? ಸತ್ಯವಂತರಿಗೆ ಇದು ಕಾಲವಲ್ಲ. ನಾನು ಸತ್ಯ ಹೇಳಿದರೆ ಕೆಲವರಿಗೆ ಅಪಥ್ಯವಾಗುತ್ತದೆ" ಎಂದು ಪ್ರಶ್ನಿಸಿದರು.

ಈ ಸಂದರ್ಭ ಸಂಚಾರಿ ನಿಯಮಗಳ ಉಲ್ಲಂಘನೆಗೆ ವಿಧಿಸಿರುವ ದಂಡದ ಕುರಿತೂ ಮಾತನಾಡಿದ ಅವರು, "ತಪ್ಪು ಮಾಡದೇ ಇರುವವರಿಗೆ ದಂಡದ ಪ್ರಶ್ನೆಯೇ ಇಲ್ಲ. ತಪ್ಪು ಮಾಡುವವರಿಗೆ ಟ್ರಾಫಿಕ್ ದಂಡ ಬೀಳುತ್ತದೆ. ನಾನೂ ಮೊದಲು ಸೀಟ್ ಬೆಲ್ಟ್ ಹಾಕುತ್ತಿರಲಿಲ್ಲ. ಟ್ರಾಫಿಕ್ ಫೈನ್ ಜಾಸ್ತಿಯಾದ ಮೇಲೆ ಕಡ್ಡಾಯವಾಗಿ ಹಾಕುತ್ತಿದ್ದೇನೆ. ನಾನು ತಪ್ಪು ಮಾಡಿದರೆ ಮೊದಲು ನನ್ನಂಥವರಿಗೆ ದಂಡ ಹಾಕಬೇಕು. ಮಿನಿಸ್ಟರ್ ಇರಲಿ, ಸಿಎಂ ಇರಲಿ ಎಲ್ಲರಿಗೂ ದಂಡ ಕಡ್ಡಾಯವಾಗಬೇಕು" ಎಂದರು.
"ಸಾರ್ವಜನಿಕರು ನೀಡುವ ದಂಡದ ಹಣದಲ್ಲಿ ರಸ್ತೆ ರಿಪೇರಿ ಮಾಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಆದರೆ ಈಗ ದನಿ ಎತ್ತಿರುವವರು ಎಷ್ಟು ಜನ ತೆರಿಗೆ ಕಟ್ಟುತ್ತಿದ್ದಾರೆ ಎಂದು ನೋಡಿಕೊಳ್ಳಲಿ. ಅಮೆರಿಕಾದಲ್ಲಿ ಶೇ. 97ರಷ್ಟು ಜನ ತೆರಿಗೆ ಕಟ್ಟುತ್ತಾರೆ. ಆದರೆ ನಮ್ಮಲ್ಲಿ ತೆರಿಗೆ ಕದಿಯುವುದು ಹೇಗೆ ಎಂದು ನೂರು ಮಾರ್ಗ ಹುಡುಕುತ್ತಾರೆ" ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications