ವೃದ್ಧ ಮಣ್ಣಿನ ಶಿಲ್ಪಿಗೆ 2000 ಬಹುಮಾನ ನೀಡಿದ ಸಚಿವ ಸಿ.ಸಿ ಪಾಟೀಲ್
ಮೈಸೂರು, ಫೆಬ್ರವರಿ 12: ಮಣ್ಣಿನ ಕಲಾಕೃತಿ ಮಾಡುವ ವೃದ್ಧ ಬಸವರಾಜಪ್ಪ ಅವರ ನೈಪುಣ್ಯತೆಗೆ ಮನಸೋತ ಸಣ್ಣ ಕೈಗಾರಿಕಾ ಸಚಿವ ಸಿ.ಸಿ ಪಾಟೀಲ್ ಅವರು ಆ ವೃದ್ಧ ಶಿಲ್ಪಿಗೆ 2000 ರುಪಾಯಿಗಳ ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಗುರುವಾರ ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಕರಕುಶಲ ಕರ್ಮಿಗಳು ತಯಾರಿಸಿದ್ದ ಕಲಾಕೃತಿಗಳು ಮತ್ತು ಮಾರಾಟ ಮಳಿಗೆಗೆ ಭೇಟಿ ನೀಡಿದ್ದ ಸಚಿವರ ಗಮನವನ್ನು, ಅಲ್ಲಿ ಸ್ಥಳದಲ್ಲೇ ಮಣ್ಣಿನಿಂದ ಮಡಿಕೆ ಹಾಗೂ ಕಲಾಕೃತಿ ಮಾಡುತ್ತಿದ್ದ ಬಸವರಾಜಪ್ಪ ಅವರು ಸೆಳೆದರು. ಅದನ್ನು ಆಸಕ್ತಿಯಿಂದ ಕೆಲ ಕ್ಷಣ ವೀಕ್ಷಿಸಿದ ಸಚಿವರು 2000 ರೂಪಾಯಿ ಹಣ ನೀಡಿ ಗೌರವಿಸಿದರು.
ತಮ್ಮ ಕುಲ ಕಸುಬಾದ ಕುಂಬಾರಿಕೆ ವೃತ್ತಿಯನ್ನೇ ಕಳೆದ 6-7 ದಶಕಗಳಿಂದ ಮುಂದುವರೆಸಿಕೊಂಡು ಬಂದಿರುವ 75 ವರ್ಷ ವಯಸ್ಸಿನ ಬಸವರಾಜಪ್ಪ ಅವರು ಅನೇಕ ಚಲನಚಿತ್ರ, ಧಾರಾವಾಹಿಗಳಿಗೂ ಬೇಕಾದ ಮಣ್ಣಿನ ಮಡಿಕೆ, ಇತರ ಸಾಮಾಗ್ರಿಗಳನ್ನು ಮಾಡಿ ಕೊಟ್ಟಿದ್ದಾರೆ.

ಪ್ರಖ್ಯಾತ ಮಾಲ್ಗುಡಿ ಡೇಸ್, ಯುಗಪುರುಷ, ಮುತ್ತಿನ ಹಾರ ಸೇರಿದಂತೆ ಹಲವಾರು ಸಿನಿಮಾಗಳಿಗೆ ಮಡಿಕೆಗಳನ್ನು ಮಾಡಿ ಕೊಟ್ಟಿದ್ದೇ ಅಲ್ಲದೆ ಆ ಸಿನಿಮಾಗಳಲ್ಲಿ ಮಡಿಕೆ ಮಾಡುವ ಪಾತ್ರವನ್ನು ಸಹ ಮಾಡಿದ್ದಾರೆ.
ತಮಗೆ ಸಚಿವರು ನೀಡಿದ ಹಣದಿಂದ ಸಂತಸವಾಗಿದೆ ಎಂದು ಹೇಳಿದ ಬಸವರಾಜಪ್ಪ, ಈ ವಸ್ತು ಪ್ರದರ್ಶನದಿಂದ ತಮ್ಮ ಕಲಾ ಪ್ರದರ್ಶನಕ್ಕೆ ಸೂಕ್ತ ಅವಕಾಶ ದೊರೆತಿದೆ ಎಂದು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications