"ಮಾಜಿ ಸಿಎಂ ಎಚ್ಡಿಕೆ ಮಾತು ಮನಸ್ಸಿಗೆ ಘಾಸಿ ಮಾಡಿತ್ತು, ಅದಕ್ಕೆ ಟೀಕಿಸಿದೆ''
ಮೈಸೂರು, ಮಾರ್ಚ್ 2: "ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಬಗ್ಗೆ ವೈಯಕ್ತಿಕವಾಗಿ, ಕೀಳಾಗಿ ಮಾತನಾಡುತ್ತಿದ್ದರು. ನನಗೆ ತುಂಬಾ ಘಾಸಿ ಆಯ್ತು, ಅದೇ ಕಾರಣಕ್ಕೆ ನಾನು ಸಹ ಮಾತನಾಡಿದೆ'' ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಹೇಳಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಜಿ ಸಿಎಂ ಕುಮಾರಸ್ವಾಮಿ ಅವರು ಪದೇ ಪದೇ ನನ್ನನ್ನು ವೈಯಕ್ತಿಕ ವಿಚಾರಕ್ಕೆ ಟೀಕಿಸಿದರು. ಆ ರೀತಿ ಮಾತನಾಡದಂತೆ ನಾಲ್ಕು ಜನರ ಬಳಿ ಹೇಳಿ ಕಳುಹಿಸಿದ್ದೆ'' ಎಂದರು.
"ಆದರೂ ಅವರು ನನ್ನ ವಿರುದ್ಧ ಮಾತನಾಡೋದನ್ನು ನಿಲ್ಲಿಸಲಿಲ್ಲ, ತೇಜೋವಧೆ ಮುಂದುವರೆಸಿದರು. ಇದರಿಂದ ಬೇಸರಗೊಂಡು ನಾನು ವೈಯಕ್ತಿಕವಾಗಿ ಅವರನ್ನು ಟೀಕಿಸಿದೆ. ರಾಜಕಾರಣದಲ್ಲಿ ವೈಯಕ್ತಿಕ ಟೀಕೆ ತಪ್ಪು ನನಗೂ ಗೊತ್ತಿದೆ. ಮಾತಿಗೆ ಮಾತು ಬೆಳೆದರೆ ಟೀಕೆಗಳು ಹೆಚ್ಚಾಗುತ್ತವೆ. ಮಾಧ್ಯಮದವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ ಬುದ್ಧಿವಾದ ಹೇಳಿದರೆ ಒಳ್ಳೆಯದು'' ಎಂದು ತಿಳಿಸಿದರು.

"ನೀರಿನ ಪೈಪ್ ಲೆಟರ್ಹೆಡ್ನಲ್ಲಿ ದುಡ್ಡು ಮಾಡುತ್ತಾನೆ ಎಂದು ಕುಮಾರಸ್ವಾಮಿ ಆರೋಪ ಮಾಡ್ತಾರೆ. ಹಾಗಾದರೆ ನಮ್ಮ ಕಾರ್ಯಕರ್ತರಿಗೆ ನಾನು ಶಿಫಾರಸು ಮಾಡಬಾರದೇ? ಅದನ್ನು ಟೀಕೆ ಮಾಡಿದರೆ ಹೇಗೆ? ಆದ್ದರಿಂದ ತಡೆದುಕೊಳ್ಳಲು ಆಗದೆ ವೈಯಕ್ತಿಕವಾಗಿ ಟೀಕೆ ಮಾಡಿದ್ದೇನೆ. ರಾಜಕಾರಣದಲ್ಲಿ ಯಶಸ್ಸು ಗಳಿಸಲು ಜನತೆಯ ಆಶೀರ್ವಾದ ಮುಖ್ಯ. ಇಲ್ಲಸಲ್ಲದ ವೈಯಕ್ತಿಕ ಟೀಕೆಗಳನ್ನು ಯಾರೂ ಮಾಡಬಾರದು. ಸಾರ್ವಜನಿಕ ಜೀವನದಲ್ಲಿ ಇತಿಮಿತಿಯಲ್ಲೇ ಬದುಕಿದ್ದೇನೆ'' ಎಂದು ಸಚಿವ ಸಿಪಿ ಯೋಗೇಶ್ವರ್ ಹೇಳಿದರು.
"ಆದರೆ ನನ್ನ ತಾಳ್ಮೆಯ ಕಟ್ಟೆ ಒಡೆದಿದ್ದಕ್ಕೆ ಕುಮಾರಸ್ವಾಮಿ ಅವರ ಬಗ್ಗೆ ವೈಯಕ್ತಿವಾಗಿ ಟೀಕಿಸಿದೆ ಎಂದು ಹೇಳಿದ ಸಚಿವರು, ಇನ್ನು, ಅಭಿವೃದ್ಧಿ ಮತ್ತು ರಾಜಕೀಯವನ್ನು ನಾನು ಮಿಶ್ರಣ ಮಾಡಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಕಟ್ಟುವುದೇ ನನ್ನ ಗುರಿ. ಜೆಡಿಎಸ್ ಪಕ್ಷವನ್ನು ನಾವು ನಂಬುವ ಪರಿಸ್ಥಿತಿ ಇಲ್ಲ. ಮೈಸೂರು ಪಾಲಿಕೆಯ ಮೈತ್ರಿ ವಿಚಾರದಲ್ಲೂ ಇದು ಮತ್ತೊಮ್ಮೆ ಸಾಬೀತಾಗಿದೆ'' ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅಭಿಪ್ರಾಯಪಟ್ಟರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications