ಕಾಲೇಜು ವಿದ್ಯಾರ್ಥಿಗಳಿಗೆ ಪ್ರೀತಿ ಪಾಠ ಮಾಡಿದ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು, ಜುಲೈ 21 : ಉನ್ನತ ಶಿಕ್ಷಣ ಸಚಿವ ಗಂಭೀರವದನ ಜಿ.ಟಿ.ದೇವೇಗೌಡ ಅವರು ಇಂದು ಪ್ರೀತಿ ಕಲಿಸುವ ಮೇಷ್ಟ್ರಾಗಿ ಬದಲಾಗಿದ್ದರು. ಹೌದು, ಅವರಿಂದು ಕಾಲೇಜು ವಿದ್ಯಾರ್ಥಿಗಳಿಗೆ ಪ್ರೀತಿ ಪಾಠ ಮಾಡಿದರು.
ಪ್ರೀತಿ ಎಂದರೇನು ಎಬುದೇ ಕೆಲರಿಗೆ ಗೊತ್ತಿಲ್ಲ, ಪ್ರೀತಿ ಮಾಡಿ ಓಡಿ ಹೋಗುವುದನ್ನೇ ನಿಜವಾದ ಪ್ರೇಮ ಎಂದು ತಪ್ಪು ತಿಳಿದುಕೊಂಡಿದ್ದಾರೆ. ಎಲ್ಲಾ ಸಮಯದಲ್ಲೂ ಒಬ್ಬರನ್ನೊಬ್ಬರು ಗೌರವದಿಂದ, ಸಮಾನವಾಗಿ ಕಾಣುವುದೇ ಪ್ರೀತಿ ಎಂದು ಅವರು ವ್ಯಾಖ್ಯಾನಿಸಿದರು.
ಪರಸ್ಪರ ಆಕರ್ಷಣೆಯೇ ಪ್ರೀತಿಯಲ್ಲ ಎಂದ ಅವರು, ಕೆಲ ವರ್ಷಗಳ ಹಿಂದೆ ವರನಿಗೆ ವರದಕ್ಷಿಣೆ ನೀಡುವ ಪರಿ ಪಾಠವಿತ್ತು. ಆದರೆ ಈಗ ವಧು ದಕ್ಷಿಣೆ ಕೊಟ್ಟು ಮದುವೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಬದಲಾದ ಪರಿಸ್ಥಿತಿ ಬಗ್ಗೆ ವ್ಯಂಗ್ಯ ಮಾಡಿದರು.

ಪೋಷಕರು ಮಕ್ಕಳಿಗೆ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಾರೆ. ಆ ಮಕ್ಕಳು ಪೋಷಕರಿಗೂ, ಗ್ರಾಮಕ್ಕೂ, ಕಾಲೇಜಿಗೂ ಒಳ್ಳೆಯ ಹೆಸರು ಬರುವಂತೆ ಸಾಧನೆ ಮಾಡಬೇಕೆಂದು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಪ್ರೀತಿಯ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವುದು ಸರಿಯಾದ ಕ್ರಮವಲ್ಲ ಎಂದ ಅವರು. ಈಗಿನ ಕಾಲದಲ್ಲಿ ಪ್ರೀತಿಸಿ ಮದುವೆಯಾಗುವದಕ್ಕೆ ಜಾತಿಗಳು ಅಡ್ಡಿಯಿಲ್ಲ. ಆದರೆ ಉತ್ತಮ ಗುಣಗಳು, ಉತ್ತಮ ನಡವಳಿಕೆ ಇರುವ ಜೀವನ ಸಂಗಾತಿಯನ್ನು ನೀವು ಹುಡುಕಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾವಂತರಾಗಿ ನೀವೇ ನಿಮ್ಮ ಸಂಗಾತಿಯ ಆಯ್ಕೆಯಲ್ಲಿ ತಪ್ಪು ದಾರಿ ತುಳಿಯಬಾರದು. ಬಹಳಷ್ಟು ಜನ ಪ್ರೀತಿಸಿ ಅದ್ಧೂರಿಯಿಂದ ಮದುವೆಯಾಗುತ್ತಾರೆ. ಆದರೆ ಮದುವೆಯಾಗಿ ಕೆಲವು ದಿನದಲ್ಲೇ ಡಿವೋರ್ಸ್ ನೀಡುತ್ತಾರೆ. ಈಗಿನ ವಕೀಲರು ಹಾಗೂ ಪೊಲೀಸರಿಗೆ ಡಿವೋರ್ಸ್ ಕೇಸ್ಗಳೇ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications