ಮೈಸೂರಿನಲ್ಲಿ ಸಚಿವ ಜಿಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರು ಅಪಘಾತ
ಮೈಸೂರು, ಏ.2: ಸಚಿವ ಜಿಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಅವರು ಹೋಗುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ದೇವೇಗೌಡರು ಮಳವಳ್ಳಿ ಕಡೆಗೆ ಯಾವುದೋ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು.
ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್
ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಚಿವರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಕಾರನ್ನು ಅಲ್ಲಿಯೇ ಬಿಟ್ಟು ಪ್ರಚಾರವನ್ನು ಮುಂದುವರೆಸಿದ್ದಾರೆ.
Comments
English summary
Senior minister GT Devegouda car met with accident. Devegouda is safe and he continued his election campaign.