Get Updates
Get notified of breaking news, exclusive insights, and must-see stories!

ವಿಶ್ವನಾಥ್ ಮಾತಿಗೆ ತಿರುಗೇಟು ನೀಡಿದ ಸಚಿವ ಜಿ ಟಿ ದೇವೇಗೌಡ

ಮೈಸೂರು, ಜೂನ್ 24 : ನಿಮಗೆ ಇಷ್ಟ ಇದ್ರೆ ಇರಿ, ಹೋಗೋದಾದ್ರೆ ಹೋಗಿ ಎಂಬ ಹೇಳಿಕೆ ನೀಡುವ ಅಧಿಕಾರ ಯಾರಿಗೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಟಿ ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳದ ಅಧ್ಯಕ್ಷ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಮ್ಮಿಶ್ರ ಸರ್ಕಾರ ನಾಲ್ಕು ವರ್ಷ ಸುಭದ್ರವಾಗಿ ಇರಲಿದೆ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಸಂಘಟನೆಗೆ ಜಾ.ದಳ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಚಿಂತನೆ ಮಾಡುತ್ತಿದ್ದಾರೆ. ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಈಗ ಏನೇನೋ ಹೇಳಿಕೆ ಕೊಟ್ಟು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

Minister GT Devegowda Clarification about H Vishwanth statement

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ದೇಶದ ಅಭಿವೃದ್ಧಿ ಮಾಡಲು ಅವರು ಮುಂದಾಗಿದ್ದಾರೆ. ಇತ್ತ ರಾಜ್ಯದಲ್ಲಿ ಸರ್ಕಾರ ಉರುಳಿಸುವ ಯತ್ನವನ್ನು ಬಿಜೆಪಿ ಕೈ ಬಿಟ್ಟಿದೆ.

ಹೀಗಿರುವಾಗ ಕಾಂಗ್ರೆಸ್ ಹಾಗೂ ಜಾ. ದಳದವರು ಅಣ್ಣ ತಮ್ಮಂದಿರಂತೆ ಇರಬೇಕು. ಏನೇ ಸಮಸ್ಯೆಗಳಿದ್ದರೂ ನಾಲ್ಕು ಗೋಡೆ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕೇ ಹೊರತು ಏನೇನೋ ವಿವಾದಾತ್ಮಕ ಹೇಳಿಕೆಯನ್ನು ಯಾರೂ ನೀಡಬಾರದು ಎಂದು ಜಿ. ಟಿ ದೇವೇಗೌಡ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+