ವಿಷ ಪ್ರಸಾದ ಸೇವನೆ: ಸಂತ್ರಸ್ತರನ್ನು ನೋಡಿ ಕಣ್ಣೀರಿಟ್ಟ ಜಿಟಿ ದೇವೇಗೌಡ
Recommended Video

ಮೈಸೂರು, ಡಿಸೆಂಬರ್ 17 : ಸುಳ್ವಾಡಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ನೀಡಿದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ - ದಿನೇ ಸಾವಿನ ಸಂಖ್ಯೆ ಏರುತ್ತಲೇ ಇದೆ.
ಇಂದು ಬೆಳಿಗ್ಗೆ ಸಹ ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ಮೈಲಿಬಾಯಿ ಎಂಬುವವರು ಸಾವಿಗೀಡಾಗಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಶವಾಗಾರಕ್ಕೆ ಆಗಮಿಸಿದ್ದ ವೇಳೆ ಮೈಲಿಬಾಯಿ ಕುಟುಂಬದವರ ರೋದನ ಕಂಡು ಭಾವುಕರಾಗಿ ಸಚಿವ ಜಿ ಟಿ ದೇವೇಗೌಡರವರು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ಮೃತ ಮೈಲಿಬಾಯಿ ಪಾರ್ಥಿವ ಶರೀರದ ಬಳಿ ಭಾವುಕರಾದ ಸಚಿವ ಜಿ ಟಿ ದೇವೇಗೌಡರವರು, ಮೈಲಿಬಾಯಿ ಮಗಳು ಪ್ರಿಯಾಬಾಯಿ ಅಳುವನ್ನು ಕಂಡು ಕಣ್ಣೀರು ಹಾಕಿದರು. ನಿನ್ನೆಯಷ್ಟೇ ಪ್ರಿಯಾಬಾಯಿಯನ್ನು ಮಾತನಾಡಿಸಿ ಸಚಿವರು ಏನು ಆಗುವುದಿಲ್ಲಮ್ಮಾ, ನಿಮ್ಮ ತಾಯಿ ಬದುಕುತ್ತಾರೆಂದು ಧೈರ್ಯ ತುಂಬಿದ್ದರು. ಅಲ್ಲದೇ ನಾವು ನಿಮ್ಮ ಮನೆಗೆ ಬರುತ್ತೇವೆಂದು ಪ್ರಿಯಾಬಾಯಿ ಬಳಿ ಅವರ ಮನೆ ವಿಳಾಸ ಬರೆಸಿಕೊಂಡಿದ್ದರು. ಇಂದು ಆಕೆ ತಾಯಿ ಮೃತಪಟ್ಟಿರುವುದನ್ನು ಕಂಡು ಬೇಸರಗೊಂಡು ತಾವೇ ಕಣ್ಣೀರು ಹಾಕಿದರು.

ಕೆ ಆರ್ ಆಸ್ಪತ್ರೆ ಶವಾಗಾರದ ಬಳಿ ಪ್ರಿಯಾ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವ ಪ್ರಸಂಗ ಕಂಡು ಮೂಕವಿಸ್ಮಿತರಂತೆ ದಿಟ್ಟಿಸಿ ನೋಡುತ್ತಿದ್ದರು ಸಚಿವ ಜಿ ಟಿ ದೇವೇಗೌಡ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ಪ್ರಸಾದಕ್ಕೆ ಆರ್ಗನೋ ಪಾಸ್ಪರಸ್ ಬೆರೆಸಲಾಗಿದೆ. ಇದರೊಂದಿಗೆ ಮೊನೊ ಕ್ರೋಟೋಫಾಸ್ ನ್ನು ಬಳಸಿದ್ದಾರೆ ಬಳಕೆ ಮಾಡಿದ್ದಾರೆ.
ಈ ಕುರಿತು ಲ್ಯಾಬ್ ರಿಪೋರ್ಟ್ ನಿಂದ ಇದು ಖಚಿತಗೊಂಡಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ವಿಷ ಬೆರೆಸಿರುವುದನ್ನು ಸಾಬೀತುಪಡಿಸಿದೆ. ತನ್ನ ಪೋಷಕರನ್ನು ಕಳೆದುಕೊಂಡ ಪ್ರಿಯಾಬಾಯಿ ಕುಟುಂಬಸ್ಥರಿಗೆ ನಮ್ಮ ಸರ್ಕಾರದ ವತಿಯಿಂದ ಎಲ್ಲಾ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ರೋಗಿಗಳನ್ನು ದಾಖಲಿಸಲಾದ ಜೆ ಎಸ್ ಎಸ್ ಆಸ್ಫತ್ರೆ, ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಜಿ.ಟಿ.ಡಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಜೊತೆಗೆ ಆಸ್ಪತ್ರೆಯ ಸಿಬ್ಬಂದಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications