ನಾನು ರೆಬೆಲ್ ಅಲ್ಲ, ಪಕ್ಷಕ್ಕೆ ಲಾಯಲ್: ನನ್ನ ಮತ್ತು ಸಿಎಂ ನಡುವೆ ವೈಯಕ್ತಿಕ ಸಂಘರ್ಷವಿಲ್ಲ: ಕೆ.ಎಸ್ ಈಶ್ವರಪ್ಪ
ಮೈಸೂರು, ಏಪ್ರಿಲ್ 2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲಾಖೆ ಗಮನಕ್ಕೆ ತರದೇ ನೇರವಾಗಿ ಕೆಲವು ಶಾಸಕರಿಗೆ ಅನುದಾನ ಬಿಡುಗಡೆಯಾಗಿದೆ. ಬೆಂಗಳೂರು ನಗರ ಜಿ.ಪಂ ಒಂದಕ್ಕೆ 65 ಕೋಟಿ ರೂ. ಅನುದಾನ ಹಂಚಿಕೆಯಾಗಿರುವುದು ಉಲ್ಲಂಘನೆಯಾಗಿದೆ. ನನ್ನ ಗಮನಕ್ಕೆ ತರದೇ ಕ್ರಿಯಾಯೋಜನೆ ಆಗಿರೋದು ತಪ್ಪು. ಈ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ನಿಯಮ ಮತ್ತು ಪ್ರಕ್ರಿಯೆ ಮೀರಿದ್ದನ್ನು ಪ್ರಶ್ನೆ ಮಾಡಿದ್ದೇನೆ ಎಂದು ತಾವು ರಾಜ್ಯಪಾಲರಿಗೆ ಪತ್ರ ಬರೆದ ಬಗ್ಗೆ ಸ್ಪಷ್ಟನೆ ನೀಡಿದರು.

ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ
ಅಲ್ಲದೆ ಇದು ನನ್ನ ಮತ್ತು ಸಿಎಂ ನಡುವಿನ ವೈಯಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತದೆ. ಆ ಹಣ ಖರ್ಚು ಮಾಡುವುದು ನನ್ನ ಇಲಾಖೆಯ ಹಕ್ಕು. ನಾನು ರೆಬೆಲ್ ಅಲ್ಲ, ಲಾಯಲ್. ನನ್ನ ಇಡೀ ಜೀವನದಲ್ಲಿ ನಾನು ಪಕ್ಷಕ್ಕೆ ರೆಬೆಲ್ ಆಗಿಲ್ಲ ಎಂದು ಹೇಳಿದರು. ಆದರೆ, ರಾಜ್ಯಪಾಲರಿಗೆ ಪತ್ರ ಬರೆದ ವಿಷಯದ ಕುರಿತು ಕೆಲವರು ಶಾಸಕರು ನಾನು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಜತೆಗೆ ಡಿ.ಕೆ ಶಿವಕುಮಾರ್ ಹೇಳುತ್ತಾರೆ, ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟನೆ ನೀಡಿದರು.

ಕೆಜೆಪಿ ಬಳಿಕ ಕೇವಲ 4 ಸ್ಥಾನ ಗಳಿಸಿದರು
ಸಿಎಂ ಬಿಎಸ್ವೈ ಕೆಜೆಪಿ ಶುರು ಮಾಡಬೇಕು ಎಂದು ಶುರು ಮಾಡಿದರು, ನಾನು ಬೇಡ ಅಂದಿದ್ದೆ, ನಾನು ಅವರು ಒಂದೇ ತಟ್ಟೆಯಲ್ಲಿ ತಿಂದವರು, ಒಂದೇ ಬ್ಯುಸಿನೆಸ್ ಮಾಡುತ್ತಿದ್ದೆವು, ಕೆಜೆಪಿ ಬಳಿಕ ಕೇವಲ 4 ಸ್ಥಾನ ಗಳಿಸಿದರು. ಮತ್ತೆ ಬಿಜೆಪಿಗೆ ಬಿಎಸ್ವೈ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ನಾನು ಡಿ.ಎಸ್ ಶಂಕರ್ ಮೂರ್ತಿ ಮಾತುಕತೆ ನಡೆಸಿದ್ದೆವು ಎಂದು ತಿಳಿಸಿದರು.

ಇದೇ ಮೊದಲ ಸಂಘರ್ಷ ಅಲ್ಲ
ಯಡಿಯೂರಪ್ಪ ಅವರು ಬಹಳ ಬೇಗ ಬೇರೆಯವರನ್ನು ನಂಬುತ್ತಾರೆ. ನನ್ನದು ಅವರದು ಇದೇ ಮೊದಲ ಸಂಘರ್ಷ ಅಲ್ಲ ಅದು ನಿಜ. ಈ ಜನ್ಮದಲ್ಲಿ ಬಿಜೆಪಿ ಸೇರುವುದಿಲ್ಲ ಅಂತ ಹೇಳಿದ್ದರು ಅದಕ್ಕೆ ನನ್ನ ಭಾಷೆಯಲ್ಲಿ ನಾನು ಉತ್ತರಿಸಿದ್ದೆ. ನಾನು ಆಗ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದೆ, ನಾನು ಪಕ್ಷಕ್ಕೆ ಲಾಯಲ್ ಆಗಿದ್ದೇನೆ. ನನ್ನ ಜಾಯಮಾನದಲ್ಲಿ ರೆಬೆಲ್ ಆಗಲ್ಲ, ನಾನು ಪಕ್ಷಕ್ಕೆ ಲಾಯಲ್ ಆಗಿದ್ದೇನೆ ಎಂದರು.

ನಾನು ಎಂದಿಗೂ ರೆಬೆಲ್ ಆಗಲ್ಲ
ಕೆಲವು ಪತ್ರಿಕೆಗಳಲ್ಲಿ ಬಿಜೆಪಿಯಲ್ಲಿ ಈಶ್ವರಪ್ಪ ರೆಬೆಲ್ ಅಂತ ಹೇಳುತ್ತಿದ್ದಾರೆ, ನಾನು ಎಂದಿಗೂ ರೆಬೆಲ್ ಆಗಲ್ಲ. ಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತೇನೆ ಎನ್ನುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಎದುರುವ ಮನುಷ್ಯ ಅಲ್ಲ, ಕೆಲವು ಶಾಸಕರು ನೀವು ಮಾಡಿರುವುದು ಸರಿ ಅಂತ ಹೇಳುತ್ತಿದ್ದಾರೆ. ಸಹಿ ಸಂಗ್ರಹ ಮಾಡುತ್ತಿರುವವರಿಗೂ ಮುಂದೆ ನಾನು ಮಾಡುತ್ತಿರುವುದು ಸರಿ ಅಂತ ಗೊತ್ತಾಗಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications