ಶಾಸಕ ತನ್ವೀರ್ ಸೇಠ್ ಗೆ ತಿರುಗೇಟು ನೀಡಿದ ಸಚಿವ ಸಾ.ರಾ.ಮಹೇಶ್
ಮೈಸೂರು, ಅಕ್ಟೋಬರ್. 22: ಕಾಂಗ್ರೆಸ್ 5 ವರ್ಷದ ಅಧಿಕಾರವಧಿಯಲ್ಲಿ ಯಾವ ರೀತಿ ದಸರಾ ಆಚರಿಸಿ, ಪಾಸ್ ಗಳನ್ನು ವಿತರಿಸಿದ್ದರೋ ಅದೇ ರೀತಿ ನಾವೂ ಮಾಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಶಾಸಕ ತನ್ವೀರ್ ಸೇಠ್ ಗೆ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರೆಲ್ಲಾ ಹೇಗೆ ದಸರಾ ಮಾಡಿದ್ದರು? ಈಗ ಹೇಗೆ ಆಗಿದೆ? ಎಂಬುದು ಎಲ್ಲರಿಗೂ ಗೊತ್ತಿದೆ. ಈ ವರ್ಷ ಜನರು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗಿಯಾಗಿದ್ದು ದಸರಾ ಯಶಸ್ಸನ್ನು ತೋರಿಸುತ್ತದೆ ಎಂದರು.
ದಸರಾ ಪಾಸ್ ಕಡಿಮೆ ಆಗಿದೆ ಎಂಬುದು ತನ್ವೀರ್ ಸೇಠ್ ಅವರ ಆರೋಪ. ಅವರು ಅಧಿಕಾರದಲ್ಲಿದ್ದಾಗ ವಿರೋಧ ಪಕ್ಷದ ಶಾಸಕರುಗಳಿಗೆ ಯಾವ ರೀತಿ ಪಾಸ್ ಕಳುಹಿಸುತ್ತಿದ್ದರೋ ಅದೇ ರೀತಿ ಅಧಿಕಾರಿಗಳು ಕಳುಹಿಸಿದ್ದಾರೆ. ಅವರ ಸಂಪ್ರದಾಯವನ್ನೇ ನಾವು ಮುಂದುವರಿಸಿದ್ದೇವೆ.

ಅವರಿಗೆ ಕಳುಹಿಸಿದ್ದ ಪಾಸ್ ಗಳನ್ನು ಸ್ವೀಕರಿಸಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಪಕ್ಷದ ವಿಷಯ ಬಂದಾಗ ನಮ್ಮ ವರಿಷ್ಠರು, ಅವರ ಪಕ್ಷದ ವರಿಷ್ಠರು ಕುಳಿತು ಮಾತನಾಡುತ್ತಾರೆ ಎಂದು ಸಾ.ರಾ.ಮಹೇಶ್ ತಿಳಿಸಿದರು.
ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ದಸರಾ ಆಚರಿಸಿದ್ದಾರೆ. ಕಳೆದ 5 ವರ್ಷವೂ ಅವರೇ ದಸರಾ ಆಚರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಅವರು ಯಾವ ರೀತಿ ಶ್ವೇತಪತ್ರ ಹೊರಡಿಸಿದ್ದರೋ ಅದೇ ರೀತಿ ನಾವೂ ಶ್ವೇತಪತ್ರ ಹೊರಡಿಸಿದ್ದೇವೆ ಎಂದು ತನ್ವೀರ್ ಸೇಠ್ ಅವರಿಗೆ ಟಾಂಗ್ ನೀಡಿದರು.
ದಸರಾ ಗಜಪಡೆ ಬಂದಾಗ ಅವರೂ ಬಂದಿದ್ದರು. ಕೆಲವು ಕಾರ್ಯಕ್ರಮಗಳಲ್ಲೂ ಭಾಗಿಯಾಗಿ ಸಹಕಾರ ನೀಡಿದ್ದಾರೆ. ಪಾಸ್ ವಿಷಯದಲ್ಲಿ ಅಸಮಾಧಾನ ಆಗಿರಬಹುದು ಎಂದು ಸಾ.ರಾ.ಮಹೇಶ್ ತಿಳಿಸಿದರು.
ದಸರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ಜನರು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮಾಧ್ಯಮದವರ ಸಹಕಾರ ಕಾರಣ. ದಸರಾ, ಪ್ರವಾಸೋದ್ಯಮದ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಸಂಪೂರ್ಣ ಸಹಕಾರ ನೀಡಿದ್ದು, ಎಲ್ಲರಿಗೂ ಕ್ರತಜ್ಞತೆ ಸಲ್ಲಿಸುತ್ತೇನೆ ಎಂದರು.
ಜಂಬೂಸವಾರಿ ಮೆರವಣಿಗೆಯಲ್ಲಿ ಸ್ವಲ್ಪ ವ್ಯತ್ಯಾಸ ಆಯಿತು. ಅದು ಬಿಟ್ಟರೆ ಉಳಿದಂತೆ ಯಾವುದೇ ಲೋಪವಾಗಿಲ್ಲ. ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ನಾಡಹಬ್ಬವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸುವ ಬಗ್ಗೆ ಪ್ರಯತ್ನ ಮಾಡುತ್ತೇವೆ ಎಂದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಂ. ಜಿ ಶಂಕರ್, ಜಂಬೂಸವಾರಿಯ ಎಲ್ಲ ಕಾರ್ಯವೂ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಯಾವುದೇ ಗೊಂದಲ ಆಗಿಲ್ಲ. ಜಂಬೂ ಸವಾರಿ ಮೆರವಣಿಗೆಯಲ್ಲಿ ಶುಭ ಮುಹೂರ್ತದಲ್ಲೇ ಪುಷ್ಪಾರ್ಚನೆ ಆಗಬೇಕೆಂಬ ಕಾರಣದಿಂದ ಮಧ್ಯದಲ್ಲಿ ಪುಷ್ಪಾರ್ಚನೆ ಮಾಡಲಾಯಿತು.
ಮೆರವಣಿಗೆ ಉದ್ಘಾಟನೆ ಹಾಗೂ ಪುಷ್ಪಾರ್ಚನೆ ನಡುವೆ 1 ಗಂಟೆ ಅವಧಿ ಮಾತ್ರ ಇದ್ದ ಹಿನ್ನೆಲೆಯಲ್ಲಿ ಹೀಗೆ ಮಾಡಬೇಕಾಯಿತು. ನಂತರ ಆನೆ ಅಂಬಾರಿ ಹೊತ್ತು ಹೆಚ್ಚು ಹೊತ್ತು ನಿಂತರೆ ಅದಕ್ಕೆ ಆಯಾಸ ಆಗುತ್ತದೆ ಎಂದು ಮಧ್ಯದಲ್ಲೇ ಹೊರಡಿಸಲಾಯಿತು. ಅಂಬಾರಿ ತೆರಳಿದಾಗ ಜನರು ನುಗ್ಗಿದ್ದರಿಂದ ಸ್ವಲ್ಪ ಗೊಂದಲವಾಯಿತು ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications