ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೀರೋ ಟ್ರಾಫಿಕ್ ತ್ಯಜಿಸಿದ ಮೈಸೂರು ಉಸ್ತುವಾರಿ ಸಚಿವ ಸೋಮಣ್ಣ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 5: ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಅಧಿಕಾರ ಕಿತ್ತುಕೊಂಡವರ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲವೆಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿಕೆ ವಿಚಾರಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.

ಜಂಬೂಸವಾರಿ ಮಾರ್ಗದಲ್ಲಿ ವಾಕ್ ಮಾಡಿ ಸಮಸ್ಯೆ ಕೇಳಿದ ಸಚಿವ ಸೋಮಣ್ಣಜಂಬೂಸವಾರಿ ಮಾರ್ಗದಲ್ಲಿ ವಾಕ್ ಮಾಡಿ ಸಮಸ್ಯೆ ಕೇಳಿದ ಸಚಿವ ಸೋಮಣ್ಣ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಾರಾ ಮಹೇಶ್ ಅವರು ಜ್ಞಾನಿಗಳು. ನನಗಿಂತ ಅಪಾರ ಬುದ್ಧಿವಂತರು. ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರಿಗೆ ಒಳ್ಳೆಯದಾಗಲಿ" ಎಂದು ನಾಜೂಕಾಗಿಯೇ ತಿರುಗೇಟು ನೀಡಿದ್ದಾರೆ.

Minister Somanna slams Sa Ra Mahesh statement about Mysuru dassara

ಜೀರೋ ಟ್ರಾಫಿಕ್ ತ್ಯಜಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, "ನಾನು ಎಲ್ಲಿ ತನಕ ಮೈಸೂರು ಉಸ್ತುವಾರಿಯಾಗಿರುತ್ತಾನೋ ಅಲ್ಲಿಯವರೆಗೂ ನನಗೆ ಜೀರೊ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾನು ಕೂಡ ಜನಸಾಮಾನ್ಯನಂತೆ ಓಡಾಡುತ್ತೇನೆ" ಎಂದರು.

ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಬಂಧನದ ವಿಚಾರಕ್ಕೆ ಪ್ರತಿಕ್ರಿಯಿಸಿ, "ಬಿಜೆಪಿ ಶಿಸ್ತಿನ ಪಕ್ಷ. ಎಂದಿಗೂ ಸೇಡಿನ ರಾಜಕಾರಣ ಮಾಡುವುದಿಲ್ಲ. ಕಾಂಗ್ರೆಸ್ ನವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಯಾಕೆ ಎಂಬುದು ಗೊತ್ತಿಲ್ಲ. ಡಿಕೆಶಿಯವರಿಗೆ ಒಳ್ಳೆಯದಾಗಲೆಂದು ಪ್ರಾರ್ಥಿಸುತ್ತೇನೆ. ಡಿಕೆಶಿ ನನಗೆ ಒಳ್ಳೆಯ ಸ್ನೇಹಿತ. ನನ್ನ ಪಕ್ಕದ ಗ್ರಾಮದವರು. ಅವರ ಬಗ್ಗೆ ನನಗೆ ಗೌರವವಿವೆ. ಕಾಂಗ್ರೆಸ್ ಆರೋಪಗಳ ಬಗ್ಗೆ ನಾನು ಮಾತನಾಡುವುದಿಲ್ಲ" ಎಂದರು.

English summary
Minister Somanna slams Sa Ra Mahesh statement about Mysuru dassara involvement. He said that, Sa Ra Mahesh is an intelligent. I can’t say anything about him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X