ಕಾಲೇಜು ಪುನರಾರಂಭ; ವಿದ್ಯಾರ್ಥಿಗಳಿಗೆ ಸಚಿವ ಸೋಮಶೇಖರ್ ಸಲಹೆ
ಮೈಸೂರು, ನವೆಂಬರ್ 17: ರಾಜ್ಯದಲ್ಲಿ ಕೋವಿಡ್ ಲಾಕ್ ಡೌನ್ ನಿಂದಾಗಿ ಕಳೆದ ಏಳು ತಿಂಗಳಿನಿಂದ ಬಂದ್ ಆಗಿದ್ದ ಕಾಲೇಜುಗಳು ಮಂಗಳವಾರದಿಂದ ತೆರೆದಿದ್ದು ವಿದ್ಯಾರ್ಥಿಗಳು ಸರ್ಕಾರದ ಮಾರ್ಗಸೂಚಿ ಅನುಸರಿಸಿ ತರಗತಿಗೆ ಹಾಜರಾಗುತ್ತಿರುವ ದೃಶ್ಯ ಕಂಡುಬಂದಿತು.
ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಬೋಧನೆಗಳು ನಿರಂತರವಾಗಿರಲಿವೆ. ಸುರಕ್ಷತಾ ಕ್ರಮವಾಗಿ ಕಾಲೇಜು ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಬರಬೇಕಿದೆ. ಅಲ್ಲದೆ ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ನಡೆಸಲು ಸರ್ಕಾರ ಸೂಚಿಸಿದೆ.
ಏತನ್ಮಧ್ಯೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ವಿದ್ಯಾರ್ಥಿಗಳೇ ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಿದ್ದಾರೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೊನಾ ಕಾರಣದಿಂದ ಈ ಕಠಿಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಲೇಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಇದರ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಿದ್ದಾರೆ.

ಕಾಲೇಜು ಪ್ರವೇಶಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಉತ್ಸುಕತೆ ಕಂಡು ಬಂತಾದರೂ ಕೊರೊನಾದಿಂದಾಗಿ ಬಹಳ ದಿನಗಳ ನಂತರ ಭೇಟಿಯಾದ ಸ್ನೇಹಿತರನ್ನು ಕೈಕುಲುಕಿ, ಪ್ರೀತಿಯಿಂದ ಆಲಂಗಿಸಿ ಮಾತನಾಡಿಸುವಂತಿಲ್ಲವೆಂಬ ಬೇಸರ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳ ಕಾಲೇಜು ಆವರಣ ಪ್ರವೇಶದ್ವಾರದಲ್ಲೇ ಅವರ ಕೈಗೆ ಸ್ಯಾನಿಟೈಸರ್ ಹಾಕಿ, ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಿರುವುದು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications