ಐತಿಹಾಸಿಕ ತಲಕಾಡು ಪಂಚಲಿಂಗ ದರ್ಶನಕ್ಕೆ ವಿದ್ಯುಕ್ತ ಚಾಲನೆ
ಮೈಸೂರು, ಡಿಸೆಂಬರ್ 14: ಸೋಮವಾರದ ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ, ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕವು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ತಲಕಾಡು ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.
ಈ ಹಿಂದೆ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆದಿತ್ತು. ಈಗ ಏಳು ವರ್ಷಕ್ಕೆ ಬಂದಿರುವುದು ನನ್ನ ಸೌಭಾಗ್ಯ ಎಂದು ತಿಳಿಸಿದ ಸಚಿವರು, ಈ ಪಂಚಲಿಂಗ ದರ್ಶನ ಮಹೋತ್ಸವದಲ್ಲಿ ಸ್ವಾಮಿ ವೈದ್ಯನಾಥೇಶ್ವರನು ಎಲ್ಲರಿಗೂ ಒಳಿತನ್ನು ಮಾಡಲಿ, ನಾಡಿಗೆ ಅಂಟಿರುವ ಕೊರೋನಾ ಮಹಾಮಾರಿ ದೂರವಾಗಲಿ, ಸಕಲರಿಗೂ ಆರೋಗ್ಯ ಹಾಗೂ ಸನ್ಮಂಗಳವನ್ನು ಕರುಣಿಸಲಿ ಎಂದು ಸಚಿವರಾದ ಸೋಮಶೇಖರ್ ಅವರು ಪ್ರಾರ್ಥಿಸಿದರು.

ಏಕಾದಶವಾರ ಆಚರಣೆ
ರುದ್ರಾಭಿಷೇಕ, ಹಾಲು, ಮೊಸರು, ತುಪ್ಪ, ಜೇನುತುಪ್ಪ, ಮೊಸರು, ಎಳನೀರು, ಭಸ್ಮೋದಿಕೆ, ಗಂಧ, ರುದ್ರೋದಕ, ಸುವರ್ಣ, ಅಕ್ಷತೋದಿಕೆ ಸೇರಿದಂತೆ ವೈದ್ಯನಾಥೇಶ್ವರನಿಗೆ 11 ರೀತಿಯ ಅಭಿಷೇಕಗಳನ್ನು ನೆರವೇರಿಸಲಾಯಿತು.

ಋಗ್ವೇದ, ಯಜುರ್ವೇದ, ಸಾಮವೇದಗಳ ಸಹಿತ ಶ್ರೀಸೂಕ್ತ, ದುರ್ಗಾ ಸೂಕ್ತ, ರುದ್ರಾ, ಚಮೆ ಸೇರಿದಂತೆ ವಿವಿಧ ಮಂತ್ರಘೋಷಗಳ ಪಠಣ ಮಾಡಲಾಯಿತು. ಈ ಮೂಲಕ ವೈದ್ಯನಾಥೇಶ್ವರ, ಮರಳೇಶ್ವರ, ಪಾತಾಳೇಶ್ವರ, ಅರ್ಕೇಶ್ವರ, ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವರುಗಳಿಗೆ ಏಕ ಕಾಲದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ವರ್ಚುವಲ್ ಪ್ರಸಾರ
ಕೋವಿಡ್-19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಮೈಸೂರು ವಾರ್ತಾ ಇಲಾಖೆ ವತಿಯಿಂದ ವರ್ಚುವಲ್ ಆಗಿ ಪ್ರಸಾರವನ್ನು ಮಾಡಲಾಯಿತು. ಮೈಸೂರು ಸೇರಿದಂತೆ ರಾಜ್ಯ, ಅಂತರಾಜ್ಯಗಳ ಜನತೆ ಮನೆಯಿಂದಲೇ ದರ್ಶನ ಮಾಡಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications