ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ: ಸಚಿವ ಎಸ್.ಟಿ.ಎಸ್ ಸಂತಸ
ಮೈಸೂರು, ಸೆಪ್ಟೆಂಬರ್ 15: ಕನ್ನಡ ಚಿತ್ರರಂಗದ ಖ್ಯಾತ ನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆನ್ ಲೈನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
""ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ.''
""ವಿಷ್ಣವರ್ಧನ್ ಅವರ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿದ್ದು, ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ'' ಎಂದರು.

ಒಟ್ಟು 11 ಕೋಟಿ ರುಪಾಯಿ ಯೋಜನೆ ಇದಾಗಿದ್ದು, ಒಟ್ಟು 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯೂ ತಲೆ ಎತ್ತುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.
ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದ್ದು, ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ಅವರ ನೆನಪುಗಳು ಚಿತ್ರ ರಸಿಕರ ಕಣ್ಮನ ಸೆಳೆಯಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಈ ವಿಚಾರವಾಗಿ ಡಾ.ವಿಷ್ಣುವರ್ಧನ್ ಅವರ ಶ್ರೀಮತಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಸರ್ಕಾರದಿಂದ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.
ವಿಷ್ಣು ಸ್ಮಾರಕಕ್ಕೆ ಅಡಿಗಲ್ಲು
ಬಹಳ ವರ್ಷಗಳ ವಿಳಂಬದ ನಂತರ ಮಂಗಳವಾರ ಕನ್ನಡ ಚಿತ್ರರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಯಿತು. ನಗರದ ಹೊರವಲಯದ ಹಾಲಾಳು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆನ್ಲೈನ್ ಮೂಲಕವೇ ಚಾಲನೆ ನೀಡಿದರು.
ಸುಮಾರು 11 ಕೋಟಿ ರೂ. ವೆಚ್ಚದ ಸ್ಮಾರಕ ನಿರ್ಮಾಣ ಮಾಡಲು ಪೊಲೀಸ್ ವಸತಿ ನಿಗಮಕ್ಕೆ ಗುತ್ತಿಗೆ ನೀಡಲಾಗಿದೆ. ಈ ಸ್ಮಾರಕ ನಿರ್ಮಾಣದ ನೀಲಿ ನಕಾಶೆಯನ್ನು ಎಂ-9 ಡಿಸೈನ್ ಸ್ಟುಡಿಯೋದಿಂದ ಮಾಡಿಸಲಾಗಿದ್ದು, ಇದರಲ್ಲಿ ವಿಷ್ಣು ಅವರ ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪಾಂಡ್ ಒಳಗೊಂಡ ಡಾ.ವಿಷ್ಣು ಸ್ಮಾರಕ ನಿರ್ಮಾಣಗೊಳ್ಳಲಿದೆ.
ಈ ಸರಳ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೆಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಿ ವಿಷ್ಣುವರ್ಧನ್, ಶಾಸಕ ಎಸ್.ಎ.ರಾಮದಾಸ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಇತರರು ಹಾಜರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications