ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ: ಸಚಿವ ಎಸ್.ಟಿ.ಎಸ್ ಸಂತಸ
ಮೈಸೂರು, ಸೆಪ್ಟೆಂಬರ್ 15: ಕನ್ನಡ ಚಿತ್ರರಂಗದ ಖ್ಯಾತ ನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆನ್ ಲೈನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
""ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ.''
""ವಿಷ್ಣವರ್ಧನ್ ಅವರ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿದ್ದು, ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ'' ಎಂದರು.

ಒಟ್ಟು 11 ಕೋಟಿ ರುಪಾಯಿ ಯೋಜನೆ ಇದಾಗಿದ್ದು, ಒಟ್ಟು 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯೂ ತಲೆ ಎತ್ತುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.
ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದ್ದು, ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ಅವರ ನೆನಪುಗಳು ಚಿತ್ರ ರಸಿಕರ ಕಣ್ಮನ ಸೆಳೆಯಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಈ ವಿಚಾರವಾಗಿ ಡಾ.ವಿಷ್ಣುವರ್ಧನ್ ಅವರ ಶ್ರೀಮತಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಸರ್ಕಾರದಿಂದ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.
ವಿಷ್ಣು ಸ್ಮಾರಕಕ್ಕೆ ಅಡಿಗಲ್ಲು
ಬಹಳ ವರ್ಷಗಳ ವಿಳಂಬದ ನಂತರ ಮಂಗಳವಾರ ಕನ್ನಡ ಚಿತ್ರರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಯಿತು. ನಗರದ ಹೊರವಲಯದ ಹಾಲಾಳು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆನ್ಲೈನ್ ಮೂಲಕವೇ ಚಾಲನೆ ನೀಡಿದರು.
ಸುಮಾರು 11 ಕೋಟಿ ರೂ. ವೆಚ್ಚದ ಸ್ಮಾರಕ ನಿರ್ಮಾಣ ಮಾಡಲು ಪೊಲೀಸ್ ವಸತಿ ನಿಗಮಕ್ಕೆ ಗುತ್ತಿಗೆ ನೀಡಲಾಗಿದೆ. ಈ ಸ್ಮಾರಕ ನಿರ್ಮಾಣದ ನೀಲಿ ನಕಾಶೆಯನ್ನು ಎಂ-9 ಡಿಸೈನ್ ಸ್ಟುಡಿಯೋದಿಂದ ಮಾಡಿಸಲಾಗಿದ್ದು, ಇದರಲ್ಲಿ ವಿಷ್ಣು ಅವರ ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪಾಂಡ್ ಒಳಗೊಂಡ ಡಾ.ವಿಷ್ಣು ಸ್ಮಾರಕ ನಿರ್ಮಾಣಗೊಳ್ಳಲಿದೆ.
ಈ ಸರಳ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೆಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಿ ವಿಷ್ಣುವರ್ಧನ್, ಶಾಸಕ ಎಸ್.ಎ.ರಾಮದಾಸ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಇತರರು ಹಾಜರಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications