ರೋಹಿಣಿ vs ಶಿಲ್ಪಾನಾಗ್ ಟಾಕ್ ವಾರ್: "2 ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ"
ಮೈಸೂರು, ಜೂನ್ 4: ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಇನ್ನು ಎರಡು ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಹೇಳಿದ್ದಾರೆ.
Recommended Video
ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಿಲ್ಪಾನಾಗ್ ಮೈಸೂರು ಪಾಲಿಕೆ ಆಯುಕ್ತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಇಬ್ಬರು ಅಧಿಕಾರಿಗಳ ನಡುವಿನ ಸಂಘರ್ಷ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಜಿಲ್ಲಾಡಳಿತದ ಸಂಘರ್ಷ ನನ್ನ ಕೈಮೀರಿದೆ. ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಸಿಎಂಗೆ ಎಲ್ಲವನ್ನು ತಿಳಿಸಿದ್ದೇನೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ ಯಾರು ತಪ್ಪು ಅಂತ ಹೇಳಲ್ಲ. ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.