ಪಿರಿಯಾಪಟ್ಟಣ: ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ
ಮೈಸೂರು, ಜು,13: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಉರುಳಿ ಬಿದ್ದಿರುವ ಮನೆಗಳಿಗೆ ತೆರಳಿದ ಸಚಿವರು, ಹಾನಿಗೀಡಾದ ಮನೆಗಳಿಗೆ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಪ್ರಮಾಣ, ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹಾನಿಗೊಳಗಾದ ಮನೆಯ ಮಾಲೀಕರು ಸಚಿವರ ಬಳಿ ತಮ್ಮ ಅಳಲು ತೋಡಿಕೊಂಡಿರು. ಅವರಿಗೆ ಸಾಂತ್ವನ ಹೇಳಿದ ಸಚಿವರು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ನೆರವು ಒದಗಿಸುವುದಾಗಿ ತಿಳಿಸಿದರು.

ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ : ಸೋಮಶೇಖರ್
ನಂತರ ಹೆಚ್.ಡಿ.ಕೋಟೆ ತಾಲೂಕಿಗೆ ತೆರಳಿದ ಸಚಿವರು, ಬೀಚನಹಳ್ಳಿಯ ಕಬಿನಿ ಅಣೆಕಟ್ಟೆಯ ಬಲದಂಡೆ ಪ್ರದೇಶದ ಕೆಳಭಾಗದಲ್ಲಿ ಮುಳುಗಡೆಯಾಗಿರುವ ಸೇತುವೆಯನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಸ್ಥಳೀಯರು ವಸತಿ ಸೌಲಭ್ಯ ಕಲ್ಪಿಸುವಂತೆ ಸಚಿವರಿಗೆ ಮನವಿ ಪತ್ರ ನೀಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಎಲ್ಲವೂ ಅಂತಿಮ ಹಂತದಲ್ಲಿದ್ದು ನಿವೇಶನ ಮಂಜೂರು ಆಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುವುದರಿಂದ ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದರು.

ಹಾನಿ ಪ್ರಮಾಣದ ಮೇಲೆ ಪರಿಹಾರ
ಮಳೆಯಿಂದ ಮನೆ ಹಾನಿಯಾದರೆ ಜಿಲ್ಲಾಡಳಿತ ತ್ವರಿತವಾಗಿ ಪರಿಹಾರ ಕಲ್ಪಿಸಲಿದೆ. ಪೂರ್ತಿ ಮನೆ ಕಳೆದುಕೊಂಡವರಿಗೆ 5 ಲಕ್ಷ, ಕಡಿಮೆ ಹಾನಿಯಾಗಿದ್ದರೆ ಹಾನಿ ಪ್ರಮಾಣದ ಮೇಲೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ಹಲವು ಅಧಿಕಾರಿಗಳು ಜೊತೆಯಲ್ಲಿದ್ದರು. ಜುಲೈ 12ರ ಅಂಕಿಅಂಶದಂತೆ ಜಲಾಶಯದ ನೀರಿನ ಮಟ್ಟ 2282.51 ಅಡಿಗಳಷ್ಟಿದ್ದು 8.74 ಟಿಎಂಸಿ ನೀರಿನ ಸಂಗ್ರಹಣೆ ಇದೆ. 34 ಸಾವಿರ ಕ್ಯೂಸೆಕ್ಸ್ ಒಳ ಹರಿವು, 35,333 ಕ್ಯೂಸೆಕ್ಸ್ ಹೊರ ಹರಿವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಾಲೆಗಳಿಗೆ ನೀರು ಹರಿಸುವಂತೆ ಸಚಿವ ಸೂಚನೆ
ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಮೊದಲಿಗೆ ಕೆರೆ ಕಟ್ಟೆಗಳು ಭರ್ತಿಯಾಗಲು ನೀರು ಹರಿಸಲಾಗುವುದು. ಈಗಾಗಲೇ ಕೆರೆಗಳಲ್ಲಿ 30% ನೀರು ತುಂಬಿದೆ. ಹತ್ತು ದಿನ ಕೆರೆಗಳಿಗೆ ನೀರು ಹರಿಸಿ ನಂತರ ನಾಲೆಗಳಿಗೆ ನೀರು ಹರಿಸುವಂತೆ ಸಚಿವರು ಸೂಚಿಸಿದರು.

ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 120ಕ್ಕೂ ಹೆಚ್ಚು ಕೆರೆಗಳು
ಜುಲೈ 15 ರಿಂದ 24ರವರೆಗೆ ಕೆರೆಗಳಿಗೆ, ಜುಲೈ 25 ರಿಂದ ಆಗಸ್ಟ್ 14ರವರೆಗೆ ನಾಲೆಗಳಿಗೆ ನೀರು ಹರಿಸಲಾಗುವುದು. ಆಗಸ್ಟ್ 15ರಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಕಬಿನಿ ಜಲಾಶಯದಲ್ಲಿ 1,08,060, ಹುಲ್ಲಹಳ್ಳಿ ಅಣೆಕಟ್ಟು ನಾಲೆ ಭಾಗದಲ್ಲಿ 14,309 ಎಕರೆ ಪ್ರದೇಶ ಸೇರಿದಂತೆ 1,22,369 ಎಕರೆ ಪ್ರದೇಶವಿದೆ. ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 120ಕ್ಕೂ ಹೆಚ್ಚು ಕೆರೆಗಳಿವೆ. ಕೊನೆಭಾಗದ ಕೆರೆಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಶಾಸಕರುಗಳಾದ ಅಶ್ವಿನ್ ಕುಮಾರ್, ಹರ್ಷವರ್ಧನ್, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
-
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications