ಹೆಣ್ಣಾನೆ ಚಾಮುಂಡಿಯನ್ನು ದತ್ತು ಪಡೆದ ಸಚಿವ ಸೋಮಶೇಖರ್
ಮೈಸೂರು, ಏಪ್ರಿಲ್ 22: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರುಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಜೊತೆ ಭೇಟಿ ನೀಡಿ ಪರಿಶೀಲಿಸಿದರು.

ಇದೇ ವೇಳೆ 16 ಹುಲಿಗಳಿಗೆ ಮಾಂಸಾಹಾರ ನೀಡಲು ಒಂದು ದಿನದ ವೆಚ್ಚವಾದ 25 ಸಾವಿರ ರುಪಾಯಿಯನ್ನು ವೈಯಕ್ತಿಕವಾಗಿ ನೀಡಿದರು.

ಪ್ರಾಣಿ-ಪಕ್ಷಿಗಳಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೈಗೊಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆಹಾರ ಕುಡಿಯುವ ನೀರು ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.












Click it and Unblock the Notifications