ಯಾರು ದೆಹಲಿಗೆ ಹೋಗಿದ್ದಾರೋ ಅವರನ್ನೇ ಕೇಳಿ: ಸಚಿವ ಸೋಮಣ್ಣ ಗರಂ
ಮೈಸೂರು, ಜೂನ್ 12: ಯಾರು ದೆಹಲಿಗೆ ಹೋಗಿದ್ದಾರೆ, ಹೋಗಿಲ್ಲ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಎಂದು ಆ ಪುಣ್ಯಾತ್ಮರನ್ನೇ ಈ ಬಗ್ಗೆ ಕೇಳಿ ಎಂದು ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ನುಡಿದರು.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ""ನನ್ನನ್ನೂ ಸೇರಿದಂತೆ ಪ್ರತಿಯೊಬ್ಬರಿಗೂ ಒಂದೊಂದು ಕಾಯಿಲೆ ಇದೆ. ನನಗೆ ಕೆಲಸ ಮಾಡುವ ಕಾಯಿಲೆ. ಅವರಿಗೆ ದೆಹಲಿಗೆ ಹೋಗುವ ಕಾಯಿಲೆ. ಆ ಕಾಯಿಲೆಯ ಮದ್ದು ಗೊತ್ತಿಲ್ಲ'' ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಯಾರು ದೆಹಲಿಗೆ ಹೋಗಿದ್ದಾರೆ, ಹೋಗಿಲ್ಲ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ನನ್ನ ಬುದ್ದಿವಂತಿಕೆಯನ್ನು ಕೊರೊನಾ ನಿಯಂತ್ರಣಕ್ಕೆ ಬಳಸುತ್ತಿದ್ದೇನೆ. ಕೆಲವರು ಆ ಬುದ್ದಿವಂತಿಕೆಯನ್ನು ಬೇರೆಯದಕ್ಕೆ ಬಳಸುತ್ತಿದ್ದಾರೆ ಎಂದು ಟೀಕಿಸಿದರು.

"ಇದು ಕೊರೊನಾ ಸೋಂಕು ನಿಯಂತ್ರಣ ಮಾಡಬೇಕಾದ ಸಮಯ. ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆಗಳು ಸರಿಯಲ್ಲ. ಸಿಎಂ ಯಡಿಯೂರಪ್ಪ ಪ್ರತಿ ಜಿಲ್ಲೆ ಜಿಲ್ಲೆಗೆ ತಿರುಗುತ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಹೈಕಮಾಂಡ್ ಇದಕ್ಕೆಲ್ಲಾ ಒಂದು ಅಂಕಿತ ಹಾಕಬೇಕಿದೆ'' ಎಂದು ತಿಳಿಸಿದರು.
10 ಲಕ್ಷ ಮನೆ ನಿರ್ಮಾಣದ ಗುರಿ
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯಿದೆ. 2023ರೊಳಗೆ 10 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ 6 ಲಕ್ಷ, ಪಟ್ಟಣ ಪ್ರದೇಶದಲ್ಲಿ 3 ಲಕ್ಷ ಮತ್ತು ಬೆಂಗಳೂರಿನಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತದೆ. ಈಗಾಗಲೇ 2.71 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಮುಗಿದಿದೆ. ಬಾಕಿ ಉಳಿದಿರುವ ಮನೆಗಳನ್ನು ನಿಗದಿತ ಅವಧಿಯೊಳಗೆ ನಿರ್ಮಿಸಿ ಅರ್ಹರಿಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವರಾದ ವಿ.ಸೋಮಣ್ಣ ಹೇಳಿದರು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications