ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಡಹಬ್ಬ ದಸರಾ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

|
Google Oneindia Kannada News

Recommended Video

Mysore Dasara 2019 :ನಾಡಹಬ್ಬ ದಸರಾ ಪೋಸ್ಟರ್, ವೆಬ್ ಸೈಟ್ ಬಿಡುಗಡೆ ಮಾಡಿದ ಸಚಿವ ವಿ ಸೋಮಣ್ಣ | Oneindia Kannada

ಮೈಸೂರು, ಆಗಸ್ಟ್ 31: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2019ರ ವೆಬ್ ಸೈಟ್ ಹಾಗೂ ಫೋಸ್ಟರ್ ಅನ್ನು ಇಂದು ಬಿಡುಗಡೆಗೊಳಿಸಲಾಯಿತು.

ಜಂಬೂಸವಾರಿ ಮಾರ್ಗದಲ್ಲಿ ವಾಕ್ ಮಾಡಿ ಸಮಸ್ಯೆ ಕೇಳಿದ ಸಚಿವ ಸೋಮಣ್ಣಜಂಬೂಸವಾರಿ ಮಾರ್ಗದಲ್ಲಿ ವಾಕ್ ಮಾಡಿ ಸಮಸ್ಯೆ ಕೇಳಿದ ಸಚಿವ ಸೋಮಣ್ಣ

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವೆಬ್ ಸೈಟ್ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಇವರೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಕಮೀಷನರ್ ಕೆ.ಟಿ.ಬಾಲಕೃಷ್ಣ ಇದ್ದರು.

: Minister V Somanna released Mysuru dassara website and poster

"ವಸ್ತು ಪ್ರದರ್ಶನ ಆರಂಭಗೊಂಡ ಬಹಳ ದಿನಗಳು ಕಳೆದರೂ ಸರ್ಕಾರಿ ಮಳಿಗೆಗಳೇ ಉದ್ಘಾಟನೆ ಅಗಿರುವುದಿಲ್ಲ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಜಿಲ್ಲಾಧಿಕಾರಿ, ಸಿಇಒಗಳ ಜೊತೆ ಮಾತನಾಡಿ, ತಕ್ಷಣವೇ ಮಳಿಗೆ ಆರಂಭಕ್ಕೆ ಕ್ರಮಕೈಗೊಳ್ಳಲು ಸೂಚಿಸಲಾಗುವುದು" ಎಂದರು.

: Minister V Somanna released Mysuru dassara website and poster

"ಜಂಬೂ ಸವಾರಿಯಲ್ಲಿ ತೆರಳುವ ಸ್ತಬ್ಧ ಚಿತ್ರಗಳಲ್ಲೂ ವಿಭಿನ್ನತೆ ಇರುವುದಿಲ್ಲ. ಹಳೆಯ ಸ್ತಬ್ಧಚಿತ್ರಗಳನ್ನು ಸ್ವಲ್ಪ ಮಾರ್ಪಾಡು ಮಾಡಿ ಮೆರವಣಿಗೆಯಲ್ಲಿ ಕಳುಹಿಸಲಾಗುತ್ತಿದೆ. ಹೊರ ಜಿಲ್ಲೆಯವರು ಇದರಲ್ಲಿ ಭಾಗವಹಿಸದೆ ಹೊಸತನ ಕಾಣುತ್ತಿಲ್ಲ. ಹಾಗಾಗಿ ಹೊರ ಜಿಲ್ಲೆಯ ಕಲಾವಿದರು ಈ ಬಾರಿ ಭಾಗವಹಿಸುವಂತೆ ನೋಡಿಕೊಳ್ಳಲಾಗುವುದು" ಎಂದರು.

: Minister V Somanna released Mysuru dassara website and poster

"ಅರಮನೆ ಅಂಗಳದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಎಚ್ಚರ ವಹಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ಗೊಂದಲ, ಗದ್ದಲ ಆಗದಂತೆ ಎಚ್ಚರ ವಹಿಸಲಾಗುವುದು. ಮೈಸೂರು ದಸರಾಗೆ ತನ್ನದೇ ಐತಿಹಾಸಿಕ ಮಹತ್ವವಿದೆ. ಈ ಉತ್ಸವದಲ್ಲಿ ಭಾಗಿಯಾಗುವುದು ಪ್ರತಿಯೊಬ್ಬರಿಗೂ ಗೌರವದ ಸಂಕೇತ. ರಾಜ್ಯಕ್ಕೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನೇ ಹಮ್ಮಿಕೊಳ್ಳಿ" ಎಂದು ಸಲಹೆ ನೀಡಿದರು.

 ವರ್ಷದ ಕೊನೆಯಲ್ಲಿ ಮೈಸೂರು, ಹಂಪಿಗೆ ಡಬಲ್ ಡೆಕ್ಕರ್ ಬಸ್? ವರ್ಷದ ಕೊನೆಯಲ್ಲಿ ಮೈಸೂರು, ಹಂಪಿಗೆ ಡಬಲ್ ಡೆಕ್ಕರ್ ಬಸ್?

ಇದೇ ಸಂದರ್ಭ, "ಪಿಕ್‌ಪಾಕೆಟ್ ಕಳ್ಳರು, ಬೀದಿ ಕಾಮಣ್ಣರು, ಮಜಾ ಮಾಡಲಿಕ್ಕಾಗಿಯೇ ದಸರಾ ಉತ್ಸವದಲ್ಲಿ ಭಾಗಿಯಾಗುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಿ. ಸಂಯಮ ಕಳೆದುಕೊಳ್ಳಬೇಡಿ. ಇಲಾಖೆಯಿಂದ ಸಿಬ್ಬಂದಿಗೆ ನೀತಿ ಪಾಠ ಬೋಧಿಸಿ. ಹೊತ್ತೊತ್ತಿಗೆ ಊಟ-ಉಪಾಹಾರ ಕೊಡಿ. ಎಲ್ಲಿಯೂ ಒಂದಿನಿತು ಅಪಚಾರವಾಗದಂತೆ ಕೆಲಸ ಮಾಡುವುದು ನಿಮ್ಮ ಜವಾಬ್ದಾರಿ" ಎಂದು ಸಚಿವ ಸೋಮಣ್ಣ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರಿಗೆ ಸೂಚಿಸಿದರು.

ಒಂಬತ್ತು ದಿನವೂ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುವುದರೊಂದಿಗೆ ಅರ್ಥಪೂರ್ಣವಾಗಿ ದಸರಾ ಆಚರಿಸಲಾಗುವುದು ಎಂದರು.

English summary
Minister V Somanna released Mysuru dassara website and poster. Also minister clarified some issued about dassara preparations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X