ಮೈಸೂರಿನಲ್ಲಿ ಪವಾಡ, ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮಹಿಳೆ!
ಮೈಸೂರು, ಮೇ 18 : ಮೈಸೂರಿನಲ್ಲಿ ಪವಾಡವೊಂದು ನಡೆದಿದೆ. ಅಂತ್ಯಸಂಸ್ಕಾರದ ವೇಳೆ ಮಹಿಳೆಯೊಬ್ಬಳು ಕಣ್ಣು ಬಿಟ್ಟು ಅಚ್ಚರಿ ಮೂಡಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪದ್ಮಾ ಲೋಡಾ ಎಂಬ 51 ವರ್ಷದ ಮಹಿಳೆ ಅಂತ್ಯಸಂಸ್ಕಾರದ ವೇಳೆ ಸ್ಮಶಾನದಲ್ಲಿ ಕಣ್ಣು ಬಿಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಾ ಲೋಡಾ ಅವರು ಮೇ 16ರಂದು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದರು. [ತಿಂಗಳ ಮಗು ನಡೆಯುತ್ತಂತೆ, ಬೆಂಕಿ ಉಗುಳುತ್ತಂತೆ!]

ಮೇ 17ರ ಮಂಗಳವಾರ ಅವರ ಅಂತ್ಯ ಸಂಸ್ಕಾರಕ್ಕಾಗಿ ಕೊನೆಯ ಹಂತದ ಕಾರ್ಯಗಳನ್ನು ಮಾಡುವಾಗ ಅವರು ಕಣ್ಣು ಬಿಟ್ಟು ಅಚ್ಚರಿ ಹುಟ್ಟಿಸಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಮೈಮೇಲೆ ಮನೆ ಬಿದ್ದಿದ್ರೂ ಮಗುವನ್ನು ಹೊಟ್ಟೆಯಲ್ಲಿ ರಕ್ಷಿಸಿದ ಮಹಾತಾಯಿ!]
ಪದ್ಮಾ ಅವರು ಮೂಲತಃ ರಾಜಸ್ಥಾನದವರು. ಮೈಸೂರು ಅಗ್ರಹಾರದಲ್ಲಿ ಅವರು ವಾಸವಾಗಿದ್ದರು. ವೈದ್ಯರು ಪದ್ಮಾ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ ಬಳಿಕ ಕುಟುಂಬದವರು ಸಂಬಂಧಿಕರು ಆಗಮಿಸಲು ನೆರವಾಗಲಿ ಎಂದು ರಾಜಸ್ಥಾನದ ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟಿದ್ದರು. [ಸಾವಿನಂಚಿನಲ್ಲಿದ್ದ ಅಮ್ಮನಿಗೆ ಮರುಜನ್ಮ ನೀಡಿದ ಮಗು!]
ಸಂಬಂಧಿಕರು ಆಗಮಿಸಿದ ಮೇಲೆ ಶವದ ಅಂತ್ಯ ಸಂಸ್ಕಾರದ ಕೊನೆ ಹಂತದ ಕಾರ್ಯಗಳನ್ನು ಮಾಡಲಾಗುತ್ತಿತ್ತು. ಈ ವೇಳೆ ಪದ್ಮಾ ಅವರು ಕಣ್ಣು ಬಿಟ್ಟಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications