ಭಾರತದ ರಕ್ಷಣೆಗೆ ಕ್ಷಿಪಣಿಗಳು ಅತ್ಯಗತ್ಯ: ಗಿರೀಶ್ ಲಿಂಗಣ್ಣ
ಮೈಸೂರು: ಭಾರತದ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವಲ್ಲಿ ಕ್ಷಿಪಣಿಗಳ ಪಾತ್ರ ಅತ್ಯಂತ ಮಹತ್ವದ್ದು ಎಂದು ರಕ್ಷಣಾ ಮತ್ತು ಬಾಹ್ಯಾಕಾಶ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಹೇಳಿದರು. ಮೈಸೂರಿನ ಸಿದ್ದಾರ್ಥ ನಗರದ ಟೆರಿಶಿಯನ್ ಕಾಲೇಜಿನ ಕನ್ನಡ ವಿಭಾಗ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಕ್ಷಿಪಣಿಗಳ ಇತಿಹಾಸ ಕುರಿತು ಮಾತನಾಡಿದರು.
ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣ, ಕ್ರೀಡೆ ಮತ್ತು ಸಿನಿಮಾಗಳಲ್ಲೇ ಸೀಮಿತವಾಗಿದ್ದು, ವಿಜ್ಞಾನ ಮತ್ತು ಸಂಶೋಧನೆಯ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು. "ಯಾವುದೇ ದೇಶ ತನ್ನ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸಿಕೊಳ್ಳದಿದ್ದರೆ, ಅದು ವೆನೆಜುವೆಲಾ ದೇಶದಂತೆಯೇ ಸಂಕಷ್ಟದ ಪರಿಸ್ಥಿತಿಗೆ ಸಿಲುಕುವ ಸಾಧ್ಯತೆ ಇದೆ" ಎಂದು ಎಚ್ಚರಿಸಿದರು.

ಯುದ್ಧದ ಸ್ವರೂಪ ಬದಲಾಗಿದೆ
ಹಿಂದಿನ ಕಾಲದಲ್ಲಿ ಯುದ್ಧಕ್ಕೆ ಮದ್ದು-ಗುಂಡುಗಳು ಅಗತ್ಯವಿದ್ದರೆ, ಇತ್ತೀಚಿನ ದಿನಗಳಲ್ಲಿ ಸೈಬರ್ ದಾಳಿಗಳೂ ಯುದ್ಧದ ಪ್ರಮುಖ ಭಾಗವಾಗಿವೆ ಎಂದು ಅವರು ಹೇಳಿದರು. ಕ್ಷಿಪಣಿ ಎಂದರೆ ಸ್ವಯಂ ಚಾಲಿತವಾಗಿ ನಿಖರ ಗುರಿಯನ್ನು ತಲುಪುವ ಆಧುನಿಕ ಶಸ್ತ್ರಾಸ್ತ್ರ ಎಂದು ಅವರು ವಿವರಿಸಿದರು.
ಗಿರೀಶ್ ಲಿಂಗಣ್ಣ ಅವರು ವಿವಿಧ ರೀತಿಯ ಕ್ಷಿಪಣಿಗಳ ಕುರಿತು ಮಾಹಿತಿ ನೀಡಿದರು. ಕ್ಷಿಪಣಿ ಎಂದರೆ ಸ್ವಯಂ ಚಾಲಿತವಾಗಿ ನಿಖರವಾದ ಗುರಿಯನ್ನು ತಲುಪುವ ಸಾಧನ. ಕ್ಷಿಪಣಿಗಳಲ್ಲಿ ಪ್ರಮುಖವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಕ್ರೂಸ್ ಕ್ಷಿಪಣಿಗಳು, ಗಾಳಿ-ಗಾಳಿ ಕ್ಷಿಪಣಿಗಳು, ಗಾಳಿ-ನೆಲೆಗೆ ಕ್ಷಿಪಣಿಗಳು, ಭೂಮಿಯಿಂದ-ಗಾಳಿಗೆ ಕ್ಷಿಪಣಿಗಳು, ಹೈಪರ್ ಸಾನಿಕ್ ಕ್ಷಿಪಣಿಗಳ ಕುರಿತು ಮಾಹಿತಿ ನೀಡಿದರು.
ರಾಕೆಟ್ ಮತ್ತು ಕ್ಷಿಪಣಿಯ ವ್ಯತ್ಯಾಸ
ರಾಕೆಟ್ ಮತ್ತು ಕ್ಷಿಪಣಿಯ ನಡುವಿನ ಪ್ರಮುಖ ವ್ಯತ್ಯಾಸವನ್ನು ವಿವರಿಸಿದ ಅವರು, "ರಾಕೆಟ್ಗಳಿಗೆ ನಿರ್ದಿಷ್ಟ ಗುರಿಯ ಮಾರ್ಗದರ್ಶನ ವ್ಯವಸ್ಥೆ ಇರುವುದಿಲ್ಲ, ಆದರೆ ಕ್ಷಿಪಣಿಗಳು ಆಂತರಿಕ ಮಾರ್ಗದರ್ಶನ ವ್ಯವಸ್ಥೆಯೊಂದಿಗೆ ನಿಖರ ಗುರಿಯನ್ನು ತಲುಪುವ ಶಸ್ತ್ರಾಸ್ತ್ರಗಳಾಗಿವೆ" ಎಂದು ಸ್ಪಷ್ಟಪಡಿಸಿದರು. ದೃಶ್ಯರೂಪಕಗಳ ಮೂಲಕ ಕ್ಷಿಪಣಿಗಳ ಇತಿಹಾಸದ ವಿವಿಧ ಮಗ್ಗಲುಗಳನ್ನು ವಿವರಿಸುವ ಮೂಲಕ ಉಪನ್ಯಾಸವನ್ನು ಇನ್ನಷ್ಟು ಆಕರ್ಷಕಗೊಳಿಸಿದರು.
ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಎಂ. ನಂಜಯ್ಯ ಹೊಂಗನೂರು ಮಾತನಾಡಿ, "ವಿದ್ಯಾರ್ಥಿಗಳು ಮೂಢನಂಬಿಕೆಯನ್ನು ಬಿಟ್ಟು ವಿಜ್ಞಾನಾತ್ಮಕ ಚಿಂತನೆಗೆ ಒತ್ತು ನೀಡಬೇಕು. ಮೊಬೈಲ್ ಬಳಕೆ ಹೆಚ್ಚಾದ ಬಳಿಕ ವಿದ್ಯಾರ್ಥಿಗಳು ಪುಸ್ತಕಗಳತ್ತ ಮುಖ ಮಾಡುತ್ತಿಲ್ಲ ಎಂಬುದು ವಿಷಾದಕರ" ಎಂದು ಹೇಳಿದರು. ವಿಜ್ಞಾನಿ ಗಿರೀಶ್ ಲಿಂಗಣ್ಣ ಅವರು 600ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆವರೆಂಡ್ ಡಾ. ಸಿಸ್ಟರ್ ರೋಹಿಣಿ, ಕನ್ನಡ ವಿಭಾಗದ ಡಾ. ಸಿ.ಸಿ. ವೆಂಕಟೇಶ್, ಸಂಯೋಜಕರಾದ ವಿವೇಕ್ ಚಾರ್ಲ್ಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications