ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ
ಇಂದು ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಮೈಸೂರು, ಮಾರ್ಚ್ 20: ಈಗಾಗಲೇ ಉಪಚುನಾವಣೆಯ ಕಣ ರಂಗೇರಿದ್ದು, ಇಂದು ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಲಘುಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ ಎನ್ನಲಾಗಿದೆ.[ರಂಗೇರಿದೆ ಕಣ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ]

ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.











Click it and Unblock the Notifications