ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡಿನ ಜುಬಿಲಿಯಂಟ್ ಕಾರ್ಖಾನೆ ಮೇಲೆ ಗರಂ ಆದ ಶಾಸಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 9: "ಕೊರೊನಾ ವ್ಯಾಪಕವಾಗಿ ಹರಡಲು ಕಾರಣವಾದ ಜುಬಿಲಿಯಂಟ್ ಕಾರ್ಖಾನೆ ಪರವಾಗಿ ಒತ್ತಡ ಬರುತ್ತಿದೆ. ಒತ್ತಡ ಹಾಕುತ್ತಿರುವವರಲ್ಲಿ ರಾಜಕಾರಣಿಗಳೂ ಇದ್ದಾರೆ, ಉದ್ಯಮಿಗಳೂ ಇದ್ದಾರೆ. ನಾನು ಯಾರ ಒತ್ತಡಕ್ಕೂ ಮಣಿಯುವ ಪ್ರಮೇಯವೇ ಇಲ್ಲ" ಎಂದು ಹೇಳಿದ್ದಾರೆ ನಂಜನಗೂಡು ಶಾಸಕ ಹರ್ಷವರ್ಧನ್.

"ಒತ್ತಡ ಹಾಕುತ್ತಿರುವವರು ಯಾರು ಎಂಬುದನ್ನು ನಾನು ಹೇಳುವುದಿಲ್ಲ. ಕೊರೊನಾ ಹರಡುವಲ್ಲಿ ಜುಬಿಲಿಯಂಟ್ ನೇರವಾಗಿ ನಿರ್ಲಕ್ಷ್ಯ ವಹಿಸಿದೆ. ಫೆಬ್ರವರಿ ತಿಂಗಳಲ್ಲೇ ಚೀನಾದಿಂದ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಂಡಿದೆ. ಆ ವೇಳೆ ಕಾರ್ಖಾನೆ ಯಾವುದೇ ಮುಂಜಾಗ್ರತಾ ಕ್ರಮ ಕೈಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ನಡೆಸುವುದು ಬೇಡ" ಎಂದು ಹೇಳಿದ್ದಾರೆ.

MLA Harshavardhan Angry Over Jubilant Factory In Nanjanagudu

ನಂಜನಗೂಡು ಜುಬಿಲಿಯಂಟ್ ಕಾರ್ಖಾನೆ ಕುರಿತು ಡಿಸಿ ಹೇಳುತ್ತಿರುವುದೇನು?ನಂಜನಗೂಡು ಜುಬಿಲಿಯಂಟ್ ಕಾರ್ಖಾನೆ ಕುರಿತು ಡಿಸಿ ಹೇಳುತ್ತಿರುವುದೇನು?

ಇದೇ ಸಂದರ್ಭ ಕಾರ್ಖಾನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, "ಕಾರ್ಖಾನೆಯವರಿಗೆ ಸೋಂಕಿಗಿಂತ ಹಣ ಮಾಡುವುದೇ ಮುಖ್ಯವಾಗಿದೆ. ಹೆಣಗಳ ಮೇಲೆ ಲಾಭ ಮಾಡಬಾರದು. ಕ್ಷೇತ್ರದ ಶಾಸಕನಾಗಿ ಇದನ್ನು ನಾನು ಸಹಿಸುವುದಿಲ್ಲ" ಎಂದು ಗರಂ ಆದರು.

English summary
''Jubilant factory is responsible for spreading of coronavirus in nanjanagudu" said mla harshavardhan in mysuru yesterday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X