ಸಿಎಂ ಬರುವ ಮಾಹಿತಿ ಕೊಡದಿದ್ದಕ್ಕೆ ಅಧಿಕಾರಿಗೆ ನಿಂದಿಸಿದ ಶಾಸಕ ನಾಗೇಂದ್ರ
Recommended Video

ಮೈಸೂರು, ಫೆಬ್ರವರಿ 19: ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ, "ಸಿಎಂ ಬರಬೇಕಾದ್ರೆ ಹೇಳೋಕೆ ಆಗಲ್ವಾ" ಅಂತ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅವಾಚ್ಯ ಶಬ್ದದಿಂದ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ.
ಸಿಎಂ ಕುಮಾರಸ್ವಾಮಿ ಬರುತ್ತಾರೆ ಎಂದು ಸ್ಥಳೀಯ ಶಾಸಕರಿಗೆ ಅಧಿಕಾರಿಗಳು ಮಾಹಿತಿ ನೀಡದ್ದರಿಂದ ಶಾಸಕ ನಾಗೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕನಿಂದ ನಿಂದನೆಗೆ ಒಳಗಾದ ಅಧಿಕಾರಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜಿ.ಆರ್.ಸುರೇಶ್.
ಈ ಹಿನ್ನೆಲೆಯಲ್ಲಿ ಮಾತನಾಡಿದ ನಾಗೇಂದ್ರ ಅವರು, ನನ್ನನ್ನ ಪದೇ ಪದೇ ಅಧಿಕಾರಿಗಳು ನಿರ್ಲಕ್ಷ ಮಾಡ್ತಾ ಇದ್ದಾರೆ.ಯಾಕೆ? ಏನು? ಎಂಬುದು ಗೊತ್ತಿಲ್ಲ. ಸಿಎಂ ಬರುವ ಅರ್ಧ ಗಂಟೆ ಮುಂಚೆ ನನಗೆ ಮಾಹಿತಿ ಕೊಡ್ತಾರೆ.ಅಧಿಕಾರಿಗಳಿಗೆ ಹೇಳಿ ಸಿಎಂ ಸರಿಪಡಿಸಬೇಕು.

ರಾಜ್ಯ ಬಜೆಟ್ ನಲ್ಲಿ ದೇವರಾಜ ಮಾರುಕಟ್ಟೆಗೆ ನಯಾ ಪೈಸೆ ಕೊಟ್ಟಿಲ್ಲ. ಈಗ ಬಂದು ವೀಕ್ಷಣೆ ಮಾಡ್ತಾ ಇದ್ದಾರೆ. ಇದರಿಂದ ಏನು ಲಾಭ ಹೇಳಿ? ತಮ್ಮ ಅಧಿಕಾರಿಗಳಿಗೆ ಸಿಎಂ ಶಿಷ್ಟಾಚಾರದ ಪಾಠ ಹೇಳಲಿ ಎಂದು ಆರೋಪಿಸಿದ್ದಾರೆ.
ಒಂದು ವೇಳೆ ನಾವು ಆಡಳಿತದಲ್ಲಿ ಇದ್ದರೆ, ಅವರಿಗೆ ಈ ರೀತಿಯಾದ್ರೆ ಬಿಡ್ತಾ ಇದ್ರಾ?.ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಜಾಡಿಸಿ ಬಿಡ್ತಾ ಇದ್ರು.ವಿಧಾನಸೌಧದಲ್ಲಿ ಈ ಬಗ್ಗೆ ದೂರು ಕೊಡ್ತೇನೆ.ಈಗ ಸಿಎಂಗೂ ಈ ವಿಚಾರವನ್ನು ಗಮನಕ್ಕೆ ತಂದಿದ್ದೇನೆ ಎಂದು ಮೈಸೂರಿನಲ್ಲಿ ಶಾಸಕ ನಾಗೇಂದ್ರ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications