ಪಿಎಂ ಕೇರ್ ಲೆಕ್ಕ ಕೇಳಿದ ಸಂಸದ ಪ್ರತಾಪ್ ಸಿಂಹಗೆ ಶಾಸಕ ರಾಮದಾಸ್ ಟಾಂಗ್
ಮೈಸೂರು, ಮೇ 31: ಕೊರೊನಾ ನಿರ್ವಹಣೆ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳ ಜಟಾಪಟಿ ನಡುವೆಯೇ, ಶಾಸಕ ಎಸ್.ಎ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ನಡುವಿನ ಒಳಜಗಳ ಬಹಿರಂಗಗೊಂಡಿದೆ.
ಮೈಸೂರು ಜಿಲ್ಲೆಗೆ ಬಂದಿರುವ ಪಿಎಂ ಕೇರ್ಸ್ ಲೆಕ್ಕ ಕೇಳಿದ ಸಂಸದ ಪ್ರತಾಪ್ ಸಿಂಹಗೆ ಶಾಸಕ ರಾಮದಾಸ್ ಟಾಂಗ್ ನೀಡಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಬ್ಯಾಟ್ ಬೀಸಿದ್ದಾರೆ.
ಕೋವಿಡ್ ನಿರ್ವಹಣೆಗಾಗಿ ಬಿಡುಗಡೆ ಮಾಡಿರುವ ಅನುದಾನದ ಸಮರ್ಪಕ ಬಳಕೆಯಾಗಿಲ್ಲ ಎಂಬ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಸಂಸದ ಪ್ರತಾಪ್ ಸಿಂಹ, ಪಿಎಂ ಕೇರ್ನಿಂದ ಬಂದ 40 ವೆಂಟಿಲೇಟರ್ಗಳನ್ನು ಇನ್ನೂ ಅಳವಡಿಕೆ ಮಾಡಿಲ್ಲ, ಇದು ಜಿಲ್ಲಾಧಿಕಾರಿಗಳ ವೈಫಲ್ಯ ತೋರಿಸುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದರು.

Recommended Video
ಆದರೆ ತಮ್ಮದೇ ಪಕ್ಷದ ಸಂಸದರ ಈ ಆರೋಪಕ್ಕೆ ಶಾಸಕ ಎಸ್.ಎ ರಾಮದಾಸ್ ತಿರುಗೇಟು ನೀಡಿದ್ದು, ನೂತನವಾಗಿ ಉದ್ಘಾಟನೆಗೊಂಡ ತುಳಸಿದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಪಿಎಂ ಕೇರ್ನ ವೆಂಟಿಲೇಟರ್ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ಫೋಟೋ ಶೇರ್ ಮಾಡಿರುವ ಶಾಸಕ ರಾಮದಾಸ್, ಪಿಎಂ ಕೇರ್ಸ್ ಲೆಕ್ಕ ಕೇಳಿದವರಿಗೆ ಟಾಂಗ್ ನೀಡಿದ್ದಾರೆ. ಆ ಮೂಲಕ ರೋಹಿಣಿ ಸಿಂಧೂರಿ ಪರ ಶಾಸಕ ರಾಮದಾಸ್ ಬ್ಯಾಟಿಂಗ್ ಮಾಡಿದ್ದರೆ, ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ರಾಮದಾಸ್ ಒಳಜಗಳ ಕೂಡ ಬಹಿರಂಗವಾದಂತಿದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications