ಕೃಷ್ಣರಾಜ ಕ್ಷೇತ್ರವನ್ನು ಕೊರೊನಾಮುಕ್ತವಾಗಿಸಲು ರಾಮದಾಸ್ ಯತ್ನ
ಮೈಸೂರು, ಜುಲೈ 24: ಮೈಸೂರು ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸೋಂಕಿನ ನಿಯಂತ್ರಣಕ್ಕೆ ಮೈಸೂರು ನಗರದಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳನ್ನು ವಿಕೇಂದ್ರೀಕರಿಸಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೃಷ್ಣರಾಜ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತ್ಯೇಕ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಶಾಸಕ ಎಸ್.ಎ.ರಾಮದಾಸ್ ಮೈಸೂರು ಮಕ್ಕಳ ಕೂಟದ ಆವರಣದಲ್ಲಿ ಉದ್ಘಾಟಿಸಿದರು.
Recommended Video
ಈ ಸಂದರ್ಭ ಮಾತನಾಡಿದ ಶಾಸಕರು, "ಮೈಸೂರಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಜೊತೆಗೆ ಸೋಂಕಿನಿಂದ ಸಾವಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಕೃಷ್ಣರಾಜ ಕ್ಷೇತ್ರಕ್ಕೆ ಅಧಿಕಾರಿಗಳ ಕಾರ್ಯಪಡೆ ರಚಿಸಿ ಅವರಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ಹಂಚಲಾಗಿದೆ. ಈ ಕಾರ್ಯಪಡೆ ನಿರಂತರ ಕಾರ್ಯನಿರ್ವಹಿಸಿ ಕೃಷ್ಣರಾಜ ಕ್ಷೇತ್ರವನ್ನು ಕೋವಿಡ್ ನಿಂದ ಸಾವಿಲ್ಲದ ಕ್ಷೇತ್ರವನ್ನಾಗಿ ಪರಿವರ್ತಿಸಲು, ಪ್ರತ್ಯೇಕ ಕೋವಿಡ್-19 ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಇಂದು ಮೈಸೂರು ಮಕ್ಕಳ ಕೂಟದ ಆವರಣದಲ್ಲಿ ಪರೀಕ್ಷಾ ಕೇಂದ್ರ ಉದ್ಘಾಟಿಸಲಾಯಿತು" ಎಂದರು.

ಕೃಷ್ಣರಾಜ ಕ್ಷೇತ್ರದಲ್ಲಿ ಒಟ್ಟು 115 ಕಂಟೈನ್ಮೆಂಟ್ ಝೋನ್ ಗಳಿದ್ದು, ಝೋನ್ ಗಳನ್ನು ಸ್ಯಾನಿಟೈಸ್ ಮಾಡುವ ಕಾರ್ಯ ನಡೆಯುತ್ತಿದೆ. ಜೊತೆಗೆ 1 ವಲಯಕ್ಕೆ ಒಂದರಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಮನೆಗಳಿಗೆ ಅವಶ್ಯಕವಾಗಿರುವ ಪದಾರ್ಥಗಳನ್ನು ಒದಗಿಸುವ ದೃಷ್ಟಿಯಿಂದ ಪ್ರತ್ಯೇಕವಾಗಿ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications