ಕೃಷ್ಣರಾಜ ಕ್ಷೇತ್ರವನ್ನು ಕೊರೊನಾಮುಕ್ತವಾಗಿಸಲು ರಾಮದಾಸ್ ಯತ್ನ
ಮೈಸೂರು, ಜುಲೈ 24: ಮೈಸೂರು ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸೋಂಕಿನ ನಿಯಂತ್ರಣಕ್ಕೆ ಮೈಸೂರು ನಗರದಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳನ್ನು ವಿಕೇಂದ್ರೀಕರಿಸಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೃಷ್ಣರಾಜ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತ್ಯೇಕ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಶಾಸಕ ಎಸ್.ಎ.ರಾಮದಾಸ್ ಮೈಸೂರು ಮಕ್ಕಳ ಕೂಟದ ಆವರಣದಲ್ಲಿ ಉದ್ಘಾಟಿಸಿದರು.
Recommended Video
ಈ ಸಂದರ್ಭ ಮಾತನಾಡಿದ ಶಾಸಕರು, "ಮೈಸೂರಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಜೊತೆಗೆ ಸೋಂಕಿನಿಂದ ಸಾವಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಕೃಷ್ಣರಾಜ ಕ್ಷೇತ್ರಕ್ಕೆ ಅಧಿಕಾರಿಗಳ ಕಾರ್ಯಪಡೆ ರಚಿಸಿ ಅವರಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ಹಂಚಲಾಗಿದೆ. ಈ ಕಾರ್ಯಪಡೆ ನಿರಂತರ ಕಾರ್ಯನಿರ್ವಹಿಸಿ ಕೃಷ್ಣರಾಜ ಕ್ಷೇತ್ರವನ್ನು ಕೋವಿಡ್ ನಿಂದ ಸಾವಿಲ್ಲದ ಕ್ಷೇತ್ರವನ್ನಾಗಿ ಪರಿವರ್ತಿಸಲು, ಪ್ರತ್ಯೇಕ ಕೋವಿಡ್-19 ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಇಂದು ಮೈಸೂರು ಮಕ್ಕಳ ಕೂಟದ ಆವರಣದಲ್ಲಿ ಪರೀಕ್ಷಾ ಕೇಂದ್ರ ಉದ್ಘಾಟಿಸಲಾಯಿತು" ಎಂದರು.

ಕೃಷ್ಣರಾಜ ಕ್ಷೇತ್ರದಲ್ಲಿ ಒಟ್ಟು 115 ಕಂಟೈನ್ಮೆಂಟ್ ಝೋನ್ ಗಳಿದ್ದು, ಝೋನ್ ಗಳನ್ನು ಸ್ಯಾನಿಟೈಸ್ ಮಾಡುವ ಕಾರ್ಯ ನಡೆಯುತ್ತಿದೆ. ಜೊತೆಗೆ 1 ವಲಯಕ್ಕೆ ಒಂದರಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಮನೆಗಳಿಗೆ ಅವಶ್ಯಕವಾಗಿರುವ ಪದಾರ್ಥಗಳನ್ನು ಒದಗಿಸುವ ದೃಷ್ಟಿಯಿಂದ ಪ್ರತ್ಯೇಕವಾಗಿ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications