ಇಬ್ಬರಿಗೂ ಪ್ರಾತಿನಿಧ್ಯ ಸಿಗಬೇಕು: ಶಾಸಕ ಎ.ರಾಮದಾಸ್
ಮೈಸೂರು, ಮೇ 25 : ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅಥವಾ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಇಬ್ಬರಲ್ಲಿ ಯಾರಿಗಾದರೂ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕೆಂದು ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಹಿರಿಯ ಅನುಭವಿ ರಾಜಕಾರಣಿ. ಅಟಲ್ ಬಿಹಾರಿ ವಾಜಪೇಯಿ ಅವಧಿಯಲ್ಲೂ ಸಚಿವರಾಗಿ ಕೆಲಸ ಮಾಡಿದ್ದರು. ಅವರ ಗೆಲುವು ಸಂತೋಷ ತಂದಿದೆ. ಇನ್ನು ಪ್ರತಾಪ್ ಸಿಂಹ ಡೈನಮಿಕ್ ಲೀಡರ್. ಬಿಜೆಪಿ ಎರಡನೇ ಹಂತದ ನಾಯಕರನ್ನು ಬೆಳೆಸುವುದರಲ್ಲಿ ವಿಶೇಷ ಆಸಕ್ತಿ ಹೊಂದಿರುವ ಪಕ್ಷ. ಹೀಗಾಗಿ ಅವರಿಗೂ ಅವಕಾಶ ಸಿಗುವಂತಾಗಲಿ ಎಂದು ಮೈಸೂರು ಕೊಡಗು, ಚಾಮರಾಜನಗರ ಸಂಸದರ ಪರ ಬ್ಯಾಟ್ ಬೀಸಿದರು.

ಜಾತಿ, ಧರ್ಮ ಎಲ್ಲವನ್ನು ಮೀರಿ ಎಲ್ಲಾ ವರ್ಗದವರು ಬಿಜೆಪಿಗೆ ಮತ ನೀಡಿದ್ದಾರೆ. ನರೇಂದ್ರ ಮೋದಿಯವರ ಮತ್ತೊಮ್ಮೆ ಪ್ರಧಾನಿ ಮಾಡಲು ಜನ ಉತ್ಸಾಹ ತೋರಿದ್ದಾರೆ. ಈ ಬಾರಿ ನನ್ನ ಕ್ಷೇತ್ರದಲ್ಲಿ 107 ವಯಸ್ಸಿನ ಅಜ್ಜಿ ಮತ ಚಲಾಯಿಸಿರುವುದು ವಿಶೇಷ. ಇಂದು ಬಿಜೆಪಿ 303 ಸ್ಥಾನಗಳಿಸಿ ದೇಶದಲ್ಲಿ ಅತ್ಯಧಿಕ ಬಹುಮತಗಳಿಸಿದೆ. ಕರ್ನಾಟಕದ ಇತಿಹಾಸದಲ್ಲಿ 25ಸ್ಥಾನ ಕೊಡುವ ಮೂಲಕ ಜನ ನಮಗೆ ಮತ್ತಷ್ಟು ಜವಾಬ್ದಾರಿ ನೀಡಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಂದಿನ 2022ರೊಳಗೆ ನರೇಂದ್ರ ಮೋದಿಯವರ ಕನಸಿನ ಕೂಸಾದ ಆಶ್ರಯ ಯೋಜನೆಯಡಿಯಲ್ಲಿ ಸ್ವಂತ ಸೂರನ್ನ ಕಲ್ಪಿಸುವ ನಿರ್ಧಾರಕ್ಕೆ ಕಾರ್ಯೋನ್ಮುಖರಾಗುತ್ತೇವೆ. ಆರೋಗ್ಯ ಮೈಸೂರು ಕಾರ್ಯಕ್ರಮದಿಂದ ಆರೋಗ್ಯ ಭದ್ರತೆ ನೀಡಲು ನಿರ್ಧರಿಸಿದ್ದೇವೆ ಎಂದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications