ತಿರುಗಿ ಬಿದ್ದ ವಿಪ್ರ ಮುಖಂಡರು: ಶಾಸಕ ಸ್ಥಾನ ಶಾಶ್ವತ ಎನ್ನುವ ಭ್ರಮೆ ಇಲ್ಲ ಎಂದು ರಾಮದಾಸ್ ಭಾವುಕ
ನಿಮ್ಮ ಮನೆ ದೇವರ ಮುಂದಿಟ್ಟ 10 ರೂಪಾಯಿಯನ್ನು ನನಗಾಗಿ ನೀಡಿ. ನಿಮಗೆ ಮಾತು ನೀಡುತ್ತೇನೆ, ಕೃಷ್ಣರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಶಾಸಕ ಎಸ್.ಎ.ರಾಮದಾಸ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮೈಸೂರು, ಮಾರ್ಚ್ 6: ನನಗೆ ಶಾಸಕ ಸ್ಥಾನ ಶಾಶ್ವತ ಎಂಬ ಭ್ರಮೆ ಇಲ್ಲ. ಒಂದಲ್ಲ ಒಂದು ದಿನ ಈ ಸ್ಥಾನವನ್ನು ನಾನಾಗಿಯೇ ಬಿಡುತ್ತೇನೆ ಎಂದು ಶಾಸಕ ಎಸ್.ಎ.ರಾಮದಾಸ್ ಭಾವುಕರಾದರು.
ಮೈಸೂರಿನ ನವಿಲು ರಸ್ತೆಯಲ್ಲಿರುವ ರಾಘವೇಂದ್ರ ಮಠದಲ್ಲಿ ನಡೆದ ಯೋಗಕ್ಷೇಮ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಏಪ್ರಿಲ್ ಮೊದಲ ವಾರದಿಂದ ಮನೆಮನೆ ಯಾತ್ರೆ ಮಾಡಬೇಕೆಂಬ ಸಂಕಲ್ಪ ಮಾಡಿದ್ದೇನೆ. ನೀವು ಸಹಕರಿಸಬೇಕು. ನಿಮ್ಮ ಮನೆ ದೇವರ ಮುಂದಿಟ್ಟ 10 ರೂಪಾಯಿಯನ್ನು ನನಗಾಗಿ ನೀಡಿ. ನಿಮಗೆ ಮಾತು ನೀಡುತ್ತೇನೆ, ಕೃಷ್ಣರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿಗೆ ಕ್ಷೇತ್ರದಲ್ಲಿ ಜಾತಿ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ನಾನು ಜಾತಿ ನೋಡಿ ಅಧಿಕಾರಕ್ಕೆ ಬಂದವನಲ್ಲಘಿ. ಇಷ್ಟು ವರ್ಷದ ಆಡಳಿತದಲ್ಲಿ ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಆದರೆ, ಇದೀಗ ಜಾತಿಯನ್ನೇ ಅಸವನ್ನಾಗಿಟ್ಟುಕೊಂಡು ಕೆಲವರು ನಿಮ್ಮ ಬಳಿ ಬರುತ್ತಿದ್ದಾರೆ. ಜಾತಿ ಹೆಸರು ಹೇಳಿಕೊಂಡು ಯಾರಾದರೂ ನಿಮ್ಮ ಮುಂದೆ ಬಂದರೆ ನಂಬಬೇಕು. ಅವರಿಗೆ ಮನ್ನಣೆ ನೀಡಬೇಡಿ ಎಂದು ಮನವಿ ಮಾಡಿದರು. ಇದೇ ವೇಳೆ ಮೇಯರ್ ಶಿವಕುಮಾರ್ ಇದ್ದರು.
ಇತ್ತೀಚಿಗೆ ಬ್ರಾಹ್ಮಣ ಸಮುದಾಯ ಮುಖಂಡರು ಶಾಸಕ ಎಸ್.ಎ.ರಾಮದಾಸ್ ವಿರುದ್ಧ ತಿರುಗಿಬಿದ್ದಿದ್ದರು. ಶಾಸಕ ರಾಮದಾಸ್ ಅವರು ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ರೀತಿಯ ಉಪಯೋಗಗಳನ್ನು ಮಾಡಿಲ್ಲ. ಸೌಲಭ್ಯ ತಂದಿಲ್ಲ ಎಂಬ ಅಸಮಾಧಾನವನ್ನು ಹೊರ ಹಾಕಿದ್ದ ವಿಪ್ರ ಮುಖಂಡರು ಮುಂದಿನ ಚುನಾವಣೆಗೆ ಅವರಿಗೆ ಟಿಕೆಟ್ ನೀಡದೆ ಸಮುದಾಯದ ಮತ್ತೊಬ್ಬ ನಾಯಕನಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುವ ಮೂಲಕ ಎಚ್.ವಿ.ರಾಜೀವ್ ಪರ ಪರೋಕ್ಷವಾಗಿ ಬ್ಯಾಟಿಂಗ್ ಮಾಡಿದ್ದರು.
ಇದೀಗ ಶಾಸಕ ರಾಮದಾಸ್ ಅವರ ವಿರುದ್ಧವೇ ಕ್ಷೇತ್ರದ ಕೆಲವು ಬ್ರಾಹ್ಮಣ ಮುಖಂಡರು ತಿರುಗಿ ಬಿದ್ದಿರುವುದನ್ನು ಗಮನಿಸಿದರೆ ಈ ಬೆಳವಣಿಗೆಯನ್ನು ಕ್ಷೇತ್ರದಲ್ಲಿ ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ. ಒಂದು ವೇಳೆ ರಾಮದಾಸ್ ಅವರಿಗೆ ಟಿಕೆಟ್ ನೀಡದಂತೆ ತಪ್ಪಿಸುವ ಕೆಲಸ ಪಕ್ಷದೊಳಗೆ ನಡೆಯುತ್ತಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ.

ಶಾಸಕ ರಾಮದಾಸ್ ಅವರು ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ರೀತಿಯ ಉಪಯೋಗಗಳನ್ನು ಮಾಡಿಲ್ಲ. ಸೌಲಭ್ಯ ತಂದಿಲ್ಲ ಎಂಬ ಅಸಮಾಧಾನವನ್ನು ಹೊರ ಹಾಕಿರುವ ವಿಪ್ರ ಮುಖಂಡರು ಮುಂದಿನ ಚುನಾವಣೆಗೆ ಅವರಿಗೆ ಟಿಕೆಟ್ ನೀಡದೆ ಸಮುದಾಯದ ಮತ್ತೊಬ್ಬ ನಾಯಕನಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ ಕಳೆದ ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಚುನಾವಣೆ ನಡೆದಾಗಲೆಲ್ಲ ರಾಮದಾಸ್ ಅವರೇ ಅಭ್ಯರ್ಥಿ ಆಗಿ ಮುಂದುವರೆಯುತ್ತಿದ್ದಾರೆ. ಇದು ಮುಂದುವರೆದರೆ ಇತರೆ ನಾಯಕರು ಮುನ್ನಲೆಗೆ ಬರುವುದು ಹೇಗೆ ಎಂಬ ಅಸಮಾಧಾನವೂ ಸಮುದಾಯದಲ್ಲಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
-
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications