ಸಿಎಂ ಯಡಿಯೂರಪ್ಪಗೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್; ಕಾರಣ?
ಮೈಸೂರು, ಮಾರ್ಚ್ 4: ಮೈಸೂರು ಪಾಲಿಕೆ ಮೇಯರ್ ಚುನಾವಣೆ ಬಳಿಕ ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳ ನಡುವೆಯೂ ತಮ್ಮ ಕ್ಷೇತ್ರದ ಅಭಿವೃದ್ಧಿಯತ್ತ ನಿಗಾವಹಿಸಿರುವ ಶಾಸಕ ತನ್ವೀರ್ ಸೇಠ್, ಈ ಬಾರಿಯ ಬಜೆಟ್ನಲ್ಲಿ ಮೈಸೂರು ನಗರ ಹಾಗೂ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
ರಾಜ್ಯ ಬಜೆಟ್ ಕೌಂಟ್ ಡೌನ್ ಶುರುವಾಗಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಆಯವ್ಯಯ ಮಂಡನೆಗೆ ಸಕಲ ಸಿದ್ಧತೆ ನಡೆದಿದೆ. ಮಾರ್ಚ್ 8ರಂದು ರಾಜ್ಯ ಬಜೆಟ್ ಅನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದು ಮೈಸೂರು ನಗರದ ಅಭಿವೃದ್ಧಿ ಕುರಿತು ಸಲಹೆ ನೀಡಿದ್ದಾರೆ.

ಈ ಕುರಿತು ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್, ಮೈಸೂರು ನಗರದ ಅಭಿವೃದ್ಧಿ ವಿಚಾರ ಕುರಿತು 30ಕ್ಕೂ ಹೆಚ್ಚು ವಿಚಾರಗಳನ್ನು ಪ್ರಸ್ತಾಪಿಸಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರು ನಂತರ ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾಗಿರುವ ಅಗತ್ಯ ಸೌಕರ್ಯಗಳನ್ನು ಬಜೆಟ್ ನಲ್ಲಿ ಮಂಜೂರು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ, ಪ್ರತ್ಯೇಕ ಜಲಮಂಡಳಿ ರಚನೆ, ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ, ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹಿಸಿದ ದಂಡ ಮೊತ್ತದ ಶೇ.50ರಷ್ಟು ಹಣವನ್ನು ಸಂಚಾರ ಅಭಿವೃದ್ಧಿಗೆ ಬಳಸುವುದು, ಪೊಲೀಸ್ ಅಕಾಡೆಮಿ ಮತ್ತು ತರಬೇತಿ ಸ್ಥಳಾಂತರಕ್ಕೆ ನಗರದ ಹೊರ ವಲಯದಲ್ಲಿ 100 ಎಕರೆ ಜಾಗ ಮೀಸಲು, ನರಸಿಂಹರಾಜ ಕ್ಷೇತ್ರದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ರೈಲ್ವೆ ಗೂಡ್ಸ್ ಶೆಡ್ ಬಳಿ ಲಾರಿ ಟರ್ಮಿನಲ್ ನಿರ್ಮಾಣ ಸೇರಿದಂತೆ ಹಲವಾರು ಬೇಡಿಕೆಗಳನ್ನು ಸಿಎಂ ಬಿ.ಎಸ್ ಯಡಿಯೂರಪ್ಪಗೆ ಶಾಸಕ ತನ್ವೀರ್ ಸೇಠ್ ಸಲ್ಲಿಕೆ ಮಾಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications