ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಳವಾಗಿ ದಸರಾ ಆಚರಿಸಿದರೆ ಚಾಮುಂಡೇಶ್ವರಿಗೆ ಅವಮಾನ ಮಾಡಿದಂತೆ: ಶಾಸಕ ತನ್ವೀರ್ ಸೇಠ್

|
Google Oneindia Kannada News

ಮೈಸೂರು, ಆಗಸ್ಟ್ 15: "ನೆರೆ ಹಿನ್ನೆಲೆ ಸರಳವಾಗಿ ದಸರಾ ಆಚರಿಸಿದರೆ ಪ್ರವಾಸೋದ್ಯಮಕ್ಕೆ ಹೊಡೆತ ಬೀಳುತ್ತದೆ. ಸರಳವಾಗಿ ನಾಡಹಬ್ಬ ಮಾಡಿದರೆ ತಾಯಿ ಚಾಮುಂಡೇಶ್ವರಿಗೆ ಅವಮಾನ ಮಾಡಿದಂತೆ" ಎಂದಿದ್ದಾರೆ ಶಾಸಕ ತನ್ವೀರ್ ಸೇಠ್.

ಬಿಜೆಪಿಯವರು ಟಿಪ್ಪು ಜಯಂತಿ ಮಾಡಬೇಕಿಲ್ಲ: ಶಾಸಕ ತನ್ವೀರ್ ಸೇಠ್
ಅತಿವೃಷ್ಟಿ ಹಿನ್ನೆಲೆ ಸರಳ ದಸರಾ ಆಚರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಶಾಸಕ ತನ್ವೀರ್ ಸೇಠ್ ವಿರೋಧ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅದಕ್ಕಾಗಿ ಸರಳ ದಸರಾ ಬದಲು ಅದ್ದೂರಿ ದಸರಾ ಮಾಡಲಿ. ಕಷ್ಟದಲ್ಲಿದ್ದಾಗಲೇ ಜನರು ದೇವರ ಹತ್ತಿರ ಹೋಗುವುದು. ಈಗ ರಾಜ್ಯದ ಜನತೆ ಕಷ್ಟದಲ್ಲಿ ಇದ್ದಾರೆ. ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಿದರೆ ತಾಯಿ ಚಾಮುಂಡೇಶ್ವರಿಗೆ ಅವಮಾನ ಮಾಡಿದಂತೆ. ರಾಜ್ಯದ ಕಷ್ಟವನ್ನ ನೀಗಿಸಲು ಚಾಮುಂಡೇಶ್ವರಿಯನ್ನ ಪೂಜಿಸಬೇಕು. ಅದಕ್ಕಾಗಿ ಅದ್ದೂರಿ ದಸರಾ ಆಚರಣೆ ಮಾಡಬೇಕು" ಎಂದರು.

MLA Tanveer Sait opposes state governments move on Dassara

ಪ್ರಸ್ತುತ ಫೋನ್ ಕದ್ದಾಲಿಕೆ ಕುರಿತು ಮಾತನಾಡಿದ ಅವು, "ಹಿಂದಿನ ಸರ್ಕಾರದ ಅವಧಿಯಲ್ಲಿ ಫೋನ್ ಕದ್ದಾಲಿಕೆ ಆಗಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಫೋನ್ ಕದ್ಧಾಲಿಕೆ ಮಾಡಿಸಿದ್ದಾರೆ. ನಮ್ಮ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಆಗಿಲ್ಲ. ಒಂದು ವೇಳೆ ಆಗಿದ್ದರೆ ಸಮಗ್ರ ತನಿಖೆ ಆಗಲಿ. ವಿಶ್ವನಾಥ್ ಹೇಳುವ ಮಾತು ಸತ್ಯವಾಗಿದ್ದರೆ ಸಿಬಿಐ ತನಿಖೆ ಮಾಡಲಿ. ಫೋನ್ ಕದ್ದಾಲಿಕೆ ಸರ್ಕಾರದಲ್ಲಿ ಅವಕಾಶ ಇದೆ. ದೇಶದ, ರಾಜ್ಯದ ಭದ್ರತೆಗಾಗಿ ಫೋನ್ ಕದ್ದಾಲಿಕೆ ಮಾಡಬಹುದು. ಆದರೆ ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಮಾಡುವುದು ತಪ್ಪು" ಎಂದರು.

English summary
MLA Tanveer Sait opposes state government's move ahead of simple Dassara celebration. He said that, CM Yadiyurappa insulted by goddesses Chamundeshwari celebrating simple Dassara
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X