ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯವರು ಟಿಪ್ಪು ಜಯಂತಿ ಮಾಡಬೇಕಿಲ್ಲ: ಶಾಸಕ ತನ್ವೀರ್ ಸೇಠ್

|
Google Oneindia Kannada News

ಮೈಸೂರು, ಆಗಸ್ಟ್ 1: "ಬಿಜೆಪಿಯವರು ಟಿಪ್ಪು ಜಯಂತಿ ಮಾಡುವುದು ಬೇಕಾಗಿಲ್ಲ. ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡುತ್ತದೆ ಎಂದು ಮೊದಲೇ ನಿರೀಕ್ಷಿಸಿದ್ದೆವು" ಎಂದಿದ್ದಾರೆ ಶಾಸಕ ತನ್ವೀರ್ ಸೇಠ್.

 ಟಿಪ್ಪು ಜಯಂತಿ ಗಲಾಟೆ ಪ್ರಕರಣಗಳು ವಾಪಸ್: ಬೋಪಯ್ಯ ಮನವಿ ಟಿಪ್ಪು ಜಯಂತಿ ಗಲಾಟೆ ಪ್ರಕರಣಗಳು ವಾಪಸ್: ಬೋಪಯ್ಯ ಮನವಿ

ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಟಿಪ್ಪು ಜಯಂತಿ ರದ್ದು ಮಾಡಿರುವುದು ನಮಗೆ ಬೇಸರವಿಲ್ಲ. ಇದನ್ನು ಮೊದಲೇ ನಿರೀಕ್ಷಿಸಿದ್ದೆವು. ಕಳೆದ ಮೈತ್ರಿ ಸರ್ಕಾರ ಕೂಡ ಟಿಪ್ಪು ಜಯಂತಿಯಂದು 144 ಸೆಕ್ಷನ್ ಜಾರಿ ಮಾಡಿ ನಾಲ್ಕು ಗೋಡೆ ಮಧ್ಯೆ ಜಯಂತಿ ಆಚರಿಸಿತ್ತು. ನಾವು ಯಾವುದೇ ಸರ್ಕಾರವನ್ನು ಟಿಪ್ಪು ಜಯಂತಿ ಮಾಡಿ ಎಂದು ಕೇಳಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಟಿಪ್ಪು ಜಯಂತಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಟಿಪ್ಪು ಎಂತಹ ವ್ಯಕ್ತಿ ಎನ್ನುವುದನ್ನು ಇತಿಹಾಸ ನೋಡಿ ತಿಳಿದುಕೊಳ್ಳಲಿ" ಎಂದರು.

MLA Tanveer Sait Reaction On Tippu Jayanthi

"ಟಿಪ್ಪು ಒಬ್ಬ ಸ್ವಾತಂತ್ರ್ಯ ಹೋರಾಟಗಾರ. ಕಳೆದ 29 ವರ್ಷಗಳಿಂದ ಟಿಪ್ಪು ಜಯಂತಿ ಆಚರಿಸುತ್ತಾ ಬಂದಿದ್ದೇವೆ. ಈ ಬಾರಿ ಇನ್ನೂ ಅದ್ಧೂರಿಯಾಗಿ ಆಚರಣೆ ಮಾಡುತ್ತೇವೆ. ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಜಾಗಕ್ಕೂ ಹೋಗಿ ಗಂಧ ಊರುಫ್ ಆಚರಿಸಿ ಬಂದಿದ್ದೇವೆ" ಎಂದು ತಿಳಿಸಿದರು.

English summary
"BJP need not to celebrate Tippu Jayanthi. We expected that the BJP government wont celebrate Tipu Jayanthi" said MLA Tanvir Seth.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X