ಪರಿಷತ್ ಫೈಟ್; ವೋಟಿಗಾಗಿ ಆಣೆ-ಪ್ರಮಾಣ, ಬಾಡೂಟ!
ಮೈಸೂರು, ಡಿಸೆಂಬರ್ 05; ವಿಧಾನ ಪರಿಷತ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗ್ರಾಮಾಂತರ ಪ್ರದೇಶದಲ್ಲಿ ಅಭ್ಯರ್ಥಿಗಳು ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರನ ಒಲಿಸಿಕೊಳ್ಳಲು ನಾನಾ ಕಸರತ್ತು ಮಾಡುತ್ತಿರುವ ರಾಜಕಾರಣಿಗಳು ವೋಟಿಗಾಗಿ ಆಣೆ-ಪ್ರಮಾಣ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ತೋಟದ ಮನೆಗಳಲ್ಲಿ ಬಾಡೂಟದ ಘಮಲು ಹೆಚ್ಚತೊಡಗಿದೆ.
ಸಾಮಾನ್ಯವಾಗಿ ಚುನಾವಣೆ ಎಂದರೆ ಅಲ್ಲಿ ಝಣಝಣ ಕಾಂಚಾಣದ ಸದ್ದು ಜೋರಾಗಿರುತ್ತದೆ. ಇದರ ಬೆನ್ನಲ್ಲೇ ಎರಡು-ಮೂರು ಗ್ರಾಮ ಪಂಚಾಯಿತಿ ಸದಸ್ಯರನ್ನು ಒಟ್ಟಿಗೆ ಸೇರಿಸಿ ರಾತ್ರಿ ಖಾರದ ಊಟದ (ಬಾಡೂಟ) ವ್ಯವಸ್ಥೆಯೂ ಅಲ್ಲಲ್ಲಿ ನಡೆಯುತ್ತಿದೆ. ಪರಿಷತ್ಗೆ ಪ್ರತಿನಿಧಿಗಳಾಗಲು ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು, ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಆಣೆ ಎನ್ನುವುದು ಒಂಥರ ಮತಕ್ಕೆ ಅಧಿಕೃತ ರಸೀದಿಯಿದ್ದಂತೆ ಎಂದು ಪಕ್ಷಗಳ ಮುಖಂಡರು ಭಾವಿಸಿದ್ದಾರೆ.
ಸಾಮಾನ್ಯವಾಗಿ ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಪಕ್ಷದ ಚಿಹ್ನೆಯ ಮೇಲೆ ಆಯ್ಕೆ ಆಗುವುದಿಲ್ಲ. ಹಾಗಾಗಿ ಹಲವಾರು ಸದಸ್ಯರು ನಾನಾ ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಭಾಗವಹಿಸುತ್ತಾರೆ. ಬಹುತೇಕರು ಎರಡು ಪಕ್ಷಗಳ ಅಭ್ಯರ್ಥಿಗಳಿಗೂ ಮತ ನೀಡುವ ವಾಗ್ದಾನ ಮಾಡಿರುತ್ತಾರೆ.

ಆದರೆ ಹಣ ಪಡೆದು ನಮಗೆ ವೋಟು ಹಾಕದೆ ಬೇರೆಯವರ ಕಡೆ ವಾಲುವ ಸಾಧ್ಯತೆಯೂ ಇರುತ್ತದೆ. ಇದಕ್ಕಾಗಿ ಆಣೆ ಪ್ರಮಾಣ ಮಾಡಿಕೊಳ್ಳಲಾಗುತ್ತದೆ. ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಮತ ಗಳಿಕೆಯ ಟ್ರೆಂಡ್ ಗೊತ್ತಾಗುತ್ತದೆ. ಯಾರಿಗೆ ಎಷ್ಟು ಮತ ಬರಬಹುದು? ಎಂಬ ಸುಳಿವು ತಿಳಿಯುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಧಾರ್ಮಿಕತೆಯ ಮೊರೆ ಹೋಗಿದ್ದಾರೆ.
ಎಣ್ಣೆ ಪಾರ್ಟಿ, ಭರ್ಜರಿ ಬಾಡೂಟ: ಈಗಾಗಲೇ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರದ ಕಣಕ್ಕೆ ಧುಮಿಕಿದ್ದಾರೆ. ಜೊತೆಗೆ ಪ್ರಚಾರ ನೆಪದಲ್ಲಿ ಕಳೆದ ನಾಲೈದು ದಿನಗಳಿಂದ ತೋಟದ ಮನೆಗಳು, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಪ್ರತಿದಿನ ಬಾಡೂಟ ಮತ್ತು ಎಣ್ಣೆ ಪಾರ್ಟಿ ಭರ್ಜರಿಯಾಗಿ ನಡೆಯಲಾರಂಭಿಸಿವೆ.
ಕೆಲವರಿಗಂತೂ ಪ್ರವಾಸ ಕರೆದುಕೊಂಡು ಹೋಗುವ ಆಮಿಷವನ್ನೂ ಒಡ್ಡಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ 5ರಿಂದ 10 ಸಾವಿರ ರೂ. ಇದ್ದ ಆಮಿಷದ ಮೊತ್ತ ಲಕ್ಷ ರೂ. ದಾಟಿ ಹೋಗಿದೆ. ಸಣ್ಣ ಕ್ಷೇತ್ರದಲ್ಲಿ ಪ್ರತಿ ಮತಕ್ಕೆ ರೇಟು 25 ಸಾವಿರ ರೂ. ಇದ್ದರೆ, ದೊಡ್ಡ ಕ್ಷೇತ್ರಗಳಲ್ಲಿ 50 ಸಾವಿರ ರೂ. ಸಾಮಾನ್ಯವಾಗಿದೆ.
"ಪರಿಷತ್ನಲ್ಲಿ ಗೆಲ್ಲಲು ಬೇಕಾದ ಎಲ್ಲಾ ಪ್ರಯತ್ನಗಳು ಪಕ್ಷಗಳು ಮಾಡುತ್ತಿವೆ. ಹಣ, ಬಾಡೂಟದ ನಂತರ ಈಗ ಗ್ರಾಮ ಪಂಚಾಯಿತಿ ಸದಸ್ಯರನ್ನು ಭಾವನಾತ್ಮಕ ವಾಗಿ ಮನವೊಲಿಸಲು ಅಭ್ಯರ್ಥಿಗಳು ದೇವರ, ಧರ್ಮದ ಅಸ್ತ್ರ ಬಳಸುತ್ತಿದ್ದಾರೆ. ಸೀಮಿತ ಸಂಖ್ಯೆಯ ಮತದಾರರಿರುವುದರಿಂದ ಮತ ಖಚಿತಪಡಿಸಿಕೊಳ್ಳಲು ಇದೀಗ ಆಣೆ ಪ್ರಮಾಣಗಳನ್ನು ಮಾಡಿಸತೊಡಗಿದ್ದಾರೆ" ಎನ್ನುತ್ತಾರೆ ಹೆಸರು ಬಹಿರಂಗಪಡಿಸಲಿಚ್ಛಿಸದ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿ.
ಪ್ರಚಾರಕ್ಕೆ ಪತ್ನಿಯರು ಸಾಥ್; ಪರಿಷತ್ ಪ್ರಚಾರ ಕಣದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಅವರ ಪತ್ನಿಯರು ಸಾಥ್ ನೀಡುತ್ತಿದ್ದಾರೆ. ಮೊದಲೆಲ್ಲಾ ಅಭ್ಯರ್ಥಿಯಾದ ಪತಿಯ ಪರ ಪತ್ನಿಯರು ಪ್ರಚಾರಕ್ಕೆ ಮುಂದಾಗುತ್ತಿರಲಿಲ್ಲ. ಬಹುತೇಕರು ಚುನಾವಣೆಯಿಂದ ದೂರವೇ ಉಳಿಯುತ್ತಿದ್ದರು. ಮನೆಯಲ್ಲಿದ್ದು ಕಾರ್ಯಕರ್ತರು, ಮುಖಂಡರಿಗೆ ಊಟೋಪಚಾರ ಮಾಡುತ್ತಿದ್ದರು. ಆದರೆ, ಈಗ ಎಲ್ಲ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಪತ್ನಿಯರು ಪ್ರಚಾರದಲ್ಲಿ ಪಾಲ್ಗೊಳುತ್ತಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ 25 ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಮತದಾನ ಮಾಡುವ ಗ್ರಾಮ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಭಾರೀ ಬೇಡಿಕೆ ಬಂದಿದೆ. ಮತದಾರರನ್ನು ಒಲಿಸಿಕೊಳ್ಳಲು ಕಸರತ್ತು ಮುಂದುವರೆದಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications