“ಸಾ.ರಾ ಮಹೇಶ್ ನನ್ನ ಸಮನಲ್ಲ, ಅವನ ಬಗ್ಗೆ ನಾನು ಮಾತನಾಡೋದಿಲ್ಲ”
ಮೈಸೂರು, ಜುಲೈ 26: "ಸಾ.ರಾ ಮಹೇಶ್ ನನ್ನ ಸಮನಲ್ಲ, ಅವನ ಬಗ್ಗೆ ನಾನು ಮಾತನಾಡೋದೆ ಇಲ್ಲ" ಎಂದು ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡಿರುವ ಎಚ್.ವಿಶ್ವನಾಥ್ ಅವರು ಶಾಸಕ ಸಾ.ರಾ ಮಹೇಶ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಸಾ.ರಾ ಮಹೇಶ್ ನನಗೆ ಸಮನಲ್ಲ, ನನ್ನ ಪ್ರತಿಸ್ಪರ್ಧಿಯೂ ಅಲ್ಲ. ನಾನಂತೂ ಅವನ ಬಗ್ಗೆ ಮಾತನಾಡೋಲ್ಲ. 'ಸಾ.ರಾ Its not match to me'. ನನ್ನ ಆಯ್ಕೆಯ ಬಗ್ಗೆ ಕಾನೂನಿನ ತೊಡಕಿದ್ದರೆ ಅದನ್ನ ರಾಜ್ಯಪಾಲರೇ ಉತ್ತರ ಕೊಡುತ್ತಾರೆ. ಇವರು ಪತ್ರ ಬರೆಯುವುದರಿಂದ ನನಗೇನು ಸಮಸ್ಯೆ ಇಲ್ಲ. ಅದನ್ನು ತೀರ್ಮಾನ ಮಾಡೋದು ರಾಜ್ಯಪಾಲರು ಎಂದು ಕಿಡಿಕಾರಿದರು.
ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್, ವಿರೋಧ ಪಕ್ಷಗಳಿಗೆ ಬರೀ ವಿರೋಧ ಮಾಡೋದು ಮಾತ್ರವೇ ಗೊತ್ತು. ಅವರು ಅಧಿಕಾರದಲ್ಲಿದ್ದಾಗ ರಾತ್ರಿ ವೇಳೆಯೂ ಸೂರ್ಯ ಚಂದ್ರ ಕಾಣುತ್ತಾರೆ. ಆದರೆ ಅವರು ಅಧಿಕಾರದಲ್ಲಿಲ್ಲ ಎಂದರೆ ಅದೇಕೋ ರಾತ್ರಿ ವೇಳೆ ಸೂರ್ಯ ಕಾಣುತ್ತಿಲ್ಲ ಎನ್ನುತ್ತಾರೆ ಎಂದರು.

ವಿರೋಧ ಪಕ್ಷದವರಿಗೆ ಸರ್ಕಾರದ ಸಾಧನೆ ಅಥವಾ ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡುವುದು ಗೊತ್ತಿಲ್ಲ. ಬಿಜೆಪಿ ಸರ್ಕಾರ ಒಂದು ವರ್ಷದಲ್ಲಿ ಒಂದಾದರೂ ಒಳ್ಳೆಯ ಕೆಲಸ ಮಾಡಿಲ್ಲವೇ? ಎಂದು ಪ್ರಶ್ನಿಸಿದ ಅವರು, ಆ ಒಂದು ಕೆಲಸವನ್ನಾದರೂ ಒಳ್ಳೆಯದು ಆಗಿದೆ ಅಂತ ಹೇಳಲಿ. ಅದನ್ನು ಬಿಟ್ಟು ಎಲ್ಲವನ್ನು ಟೀಕೆ ಮಾಡುವುದು ಸರಿಯಲ್ಲ. ವಿರೋಧ ಪಕ್ಷದ ನಾಯಕರ ನಿಲುವುಗಳು ದ್ವಂದ್ವದಿಂದ ಕೂಡಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮ ತಂಡ ಕಟ್ಟಿಕೊಂಡು ಕೆಲಸ ಮಾಡಿದ್ದಾರೆ. ಆದರೆ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಕೋವಿಡ್ ನುಂಗಿಹಾಕಿದೆ. ಆದರೂ ಕಷ್ಟದ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದು, ಇಂತಹ ಸರ್ಕಾರ ಅಧಿಕಾರಕ್ಕೆ ಬರಲು ನಾವು ಕಾರಣರಾಗಿದ್ದೇವೆ ಎನ್ನುವುದು ನನಗೆ ಹೆಮ್ಮೆ ತಂದಿದೆ. ನಮ್ಮ ನಡೆಯಿಂದ ಸಂವಿಧಾನದ ಅಡಿಯಲ್ಲಿ ಇಂತಹ ಬದಲಾವಣೆ ಆಗಿದೆ ಎನ್ನುವ ಸಮಾಧಾನವಿದೆ. ಒಂದು ವರ್ಷದ ಈ ಸಾಧನೆ ನನಗೆ ಸಾರ್ಥಕತೆ ಅನುಭವ ತಂದಿದೆ ಎಂದು ಸರ್ಕಾರಕ್ಕೆ ಶುಭಾಶಯ ಕೋರಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications